Featured

ಕಾಪು : ಹೊಸ ಮಾರಿಗುಡಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ – vishwanews24

ಕಾಪು : ಹೊಸ ಮಾರಿಗುಡಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಜೂ. 25 ರಂದು ಸ್ವರ್ಣ ಸಮರ್ಪಣಾ ಸಮಾರಂಭಕ್ಕೆ ಚಾಲನೆ

ಕಾಪು : ಪ್ರಥಮ ಹಂತದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ, ಅತ್ಯಾಕರ್ಷವಾದ ಇಳಕಲ್ ಕೆಂಪು ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿ ದೇವಸ್ಥಾನದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಗೆ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಜೂ. 25 ರಿಂದ ಅವಕಾಶ ಮಾಡಿಕೊಡಲಾಗುವುದು ಎಂದು ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.‌ವಾಸುದೇವ ಶೆಟ್ಟಿ ಹೇಳಿದರು.

ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ವಿದ್ವಾನ್ ಕುಮಾರಗುರು ತಂತ್ರಿ ಮತ್ತು ಅರ್ಚಕ ವೇ.ಮೂ. ಕೆ. ಶ್ರೀನಿವಾಸ ತಂತ್ರಿ ಅವರ ನೇತೃತ್ವದಲ್ಲಿ, ಶಿಲಾ ಸೇವೆ, ಶಿಲಾ ಕಂಬ ಸಮರ್ಪಿಸಿದ ದಾನಿಗಳು, ಭಕ್ತರು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಜೂ. 25 ರಂದು ಬೆಳಿಗ್ಗೆ 9.09 ಕ್ಕೆ ಸ್ವರ್ಣ ಗೌರಿ ಪೂಜೆ ನೆರವೇರಿಸಿ, ಬಳಿಕ ಸ್ವರ್ಣ ಸಮರ್ಪಣಾ ಸಮಾರಂಭಕ್ಕೆ ಚಾಲನೆ ನೀಡಲಾಗುವುದು ಎಂದರು.‌

ಪ್ರಥಮ ಹಂತದ ಸ್ವರ್ಣ ಸಮರ್ಪಣಾ ಸಂಕಲ್ಪದಲ್ಲಿ ಭಾಗವಹಿಸುವ ಭಕ್ತರಿಗೆ ಜೂ. 21ರವರೆಗೆ ಹೆಸರು ನೋಂದಾಯಿಸಲು ಅವಕಾಶವಿದೆ. ಸ್ವರ್ಣ ಸಮರ್ಪಣಾ ಸಮಾರಂಭ ಮತ್ತು ಮಾರಿಯಮ್ಮ ದೇವಿಯ ಸನ್ನಿಧಾನದಲ್ಲೇ ಸ್ವರ್ಣ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು.

 

20 ಕೆಜಿ‌ ಸ್ವರ್ಣ, 160 ಕೆಜಿ ಬೆಳ್ಳಿ : ಕಾಪು ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಯ ನೂತನ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ 20 ಕೆಜಿ ಚಿನ್ನ, 160 ಕೆಜಿ ಬೆಳ್ಳಿ ಉಪಯೋಗಿಸಲಾಗುತ್ತದೆ. ಈಗಾಗಲೇ ಪ್ರಸಿದ್ಧ ಜ್ಯುವೆಲ್ಲರಿ ಸಂಸ್ಥೆಯವರಿಂದ ಕೊಟೇಷನ್‌ ಆಹ್ವಾನಿಸಲಾಗಿದ್ದು ಸೂಕ್ತವೆನಿಸುವವರಿಗೆ ಸ್ವರ್ಣ ಗದ್ದುಗೆ ನಿರ್ಮಾಣದ ಗುತ್ತಿಗೆ ವಹಿಸಿ ಕೊಡಲಾಗುವುದು ಎಂದರು

ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ,‌ ಅಯೋಧ್ಯೆ ರಾಮ ಮಂದಿರ ಮಾದರಿಯಲ್ಲಿ ಕಾಪು ಮಾರಿಯಮ್ಮ ದೇವಿಯ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳು ದಕ್ಷಿಣ ಭಾರತದಲ್ಲಿ ಅತ್ಯಪೂರ್ವವೆಂಬಂತೆ ನಡೆಯುತ್ತಿದೆ. ಅದಕ್ಕೆ ಪೂರಕವಾಗಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ನಿರ್ಮಿಸಿ ಸಮರ್ಪಿಸಲು ಸಂಕಲ್ಪಿಸಲಾಗಿದ್ದು ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರು ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆನ್ನುವುದು ಸಮಿತಿಯ ಆಶಯವಾಗಿದೆ.

 

ಬಳಸಿದ ಚಿನ್ನ ಸಮರ್ಪಣೆಗೂ ಅವಕಾಶ : ಗದ್ದುಗೆಯೇ ಪ್ರಧಾನವಾಗಿರುವ ಕಾಪು‌ ಮಾರಿಗುಡಿಯಲ್ಲಿ ಸ್ವರ್ಣ ಗದ್ದುಗೆ ಸಮರ್ಪಣೆಗೆ ಹೊಸ ಚಿನ್ನದೊಂದಿಗೆ ಭಕ್ತರು ತಾವು ಉಪಯೋಗಿಸಿದ, ಬಳಸಿದ ಚಿನ್ನಗಳನ್ನೂ ಹರಕೆಯ ರೂಪದಲ್ಲಿ ಸಮರ್ಪಿಸಲು ಅವಕಾಶವಿದೆ. ಸಮಿತಿಯ ಸಂಕಲ್ಪಕ್ಕೆ ಮಾರಿಯಮ್ಮ ದೇವಿಯ ಅಭಯವೂ ಸಿಕ್ಕಿದ್ದು ಸ್ವರ್ಣ ನೀಡಿದ ಭಕ್ತರ ಕಷ್ಟ ಕಾರ್ಪಣ್ಯಗಳನ್ನು ತನ್ನ ಕಾಲಬುಡಕ್ಕೆ ಹಾಕಿಕೊಳ್ಳುವುದಾಗಿ ಅಮ್ಮನ ನುಡಿಯಾಗಿದೆ ಎಂದರು.

ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಸ್ವರ್ಣ ಸಮರ್ಪಣಾ ಸಮಿತಿ ಕಾರ್ಯಾಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಸನ್ನ ಆಚಾರ್ಯ, ಕಾರ್ಯದರ್ಶಿ ರವಿ ಭಟ್ ಮಂದಾರ, ಕಚೇರಿ ನಿರ್ವಹಣಾ ಸಮಿತಿಯ ಜಯರಾಮ ಆಚಾರ್ಯ, ಸಂದೀಪ್ ಕು‌ಮಾರ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

4 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

5 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

5 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

8 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

8 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

8 hours ago