ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಹಿರಿಯಡಕ ಗ್ರಾಮ ಪಂಚಾಯತ್ ನಲ್ಲಿ ವಿತರಿಸಿದರು.
ಸುಮಾರು 20 ಕ್ಕೂ ಅಧಿಕ ವರ್ಷಗಳಿಂದ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 20 ಫಲಾನುಭವಿಗಳು,ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ11 ಫಲಾನುಭವಿಗಳು, ಪೆರ್ಡೂರು ಗ್ರಾಮ ಪಂಚಾಯತ್ ವ್ವ್ಯಾಪ್ತಿಯ2 ಫಲಾನುಭವಿಗಳು, 80 ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 1 ಫಲಾನುಭವಿಗೆ ಸೇರಿದಂತೆ ಒಟ್ಟು 34 ಫಲಾನುಭವಿಗೆ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತಿ ಶೆಟ್ಟಿ, ಹರೀಶ್ ಸಾಲಿಯಾನ್, ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುರಂದರ ಕೋಟ್ಯಾನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚೇತನಾ ಶೆಟ್ಟಿ, ಉಪಾಧ್ಯಕ್ಷ ದೇವು ಪೂಜಾರಿ, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಕೋಟ್ಯಾನ್ ಹಾಗೂ ಗುರುರಾಜ್, ಹಾಗೂ ಕಂದಾಯ ನಿರೀಕ್ಷರು, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…