ಕಾಪು: ಕರಾವಳಿ ಪ್ರವಾಸೋದ್ಯಮ, ಹೊಸ ಮಾರಿಗುಡಿಯ ಜೀರ್ಣೋದ್ಧಾರ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಪುಚಾರ ನಡೆಸಿ, ಉತ್ತರ ಭಾರತ ಸಹಿತವಾಗಿ ಮೇಘಾಲಯ, ಮಿರೋರಾಂ, ಒಡಿಶಾ ಸಹಿತ 19 ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಮರಳಿದ ಶಟರ್ ಬಾಕ್ಸ್ ಖ್ಯಾತಿಯ ಕಾಪು ಸಚಿನ್ ಶೆಟ್ಟಿ ಮತ್ತು ಅಭಿಷೇಕ್ ಶೆಟ್ಟಿ ತಂಡವನ್ನು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸ್ವಾಗತಿಸಲಾಯಿತು.
ಕಾಪುವಿಗೆ ಆಗಮಿಸಿದ ಸಚಿನ್ ಶೆಟ್ಟಿ ಮತ್ತು ಅವರ ತಂಡವನ್ನು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಕಲ್ಯ, ಉಪಾಧ್ಯಕ್ಷ ಮಾಧವ ಆರ್. ಪಾಲನ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ, ಮೊದಲಾದವರು ಸ್ವಾಗತಿಸಿದರು. ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಅವರು ಶ್ರೀ ಮಾರಿಯಮ್ಮ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಪುಸಾದ ನೀಡಿ ಗೌರವಿಸಿದರು.
ಈ ಸಂದರ್ಭ ಸಚಿನ್ ಶೆಟ್ಟಿ, ಮಾತನಾಡಿ, ಕಳೆದ ಅಕ್ಟೋಬರ್ 5ರಂದು ಹೊಸ ಮಾರಿಗುಡಿಯಿಂದ ಹೊರಟು ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಮೇಘಾಲಯ, ತ್ರಿಪುರ, ಮಿರೋರಾಂ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪದೇಶ, ಅಸ್ಸಾಂ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ ರಾಜ್ಯಗಳಿಗೆ ತೆರಳಿ ಈಶಾನ್ಯ ರಾಜ್ಯಗಳ ಅಧ್ಯಯನ ಪವಾಸ ಮಾಡಿ 53 ದಿನಗಳ ನಂತರ ಕಾಪುವಿಗೆ ಆಗಮಿಸಿದ್ದೇವೆ. ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರದ ಬಗ್ಗೆ, ನವದುರ್ಗಾ ಲೇಖನ ಯಜ್ಞದ ಬಗ್ಗೆಯೂ ವಿವಿಧೆಡೆ ಮಾಹಿತಿ ನೀಡಿದ್ದು, 53 ದಿನಗಳ ಪ್ರವಾಸದಲ್ಲಿ 13 ಸಾವಿರಕ್ಕೂ ಅಧಿಕ ಕಿಲೋಮೀಟರ್ ಸಂಚರಿಸಿದ್ದೇವೆ ಎಂದರು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…