Featured

ಕಾಪು: 8 ವರ್ಷಗಳ ಹಿಂದೆ ಮಲ್ಲಾರಿನಲ್ಲಿ ಮನೆಗಳ್ಳತನ ಮಾಡಿತ ಖತರ್ನಾಕ್ ಕಳ್ಳರ ಬಂಧನ.vishwanews24

ಕಾಪು: 8 ವರ್ಷಗಳ ಹಿಂದೆ ಮಲ್ಲಾರಿನಲ್ಲಿ ಮನೆಗಳ್ಳತನ ಮಾಡಿತ ಖತರ್ನಾಕ್ ಕಳ್ಳರ ಬಂಧನ

ಕಾಪು:  ಕಾಪು ಠಾಣಾ ವ್ಯಾಪ್ತಿಯ ಮಲ್ಲಾರು ಕೋಟೆ ಎಂಬಲ್ಲಿ ಮನೆಗಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರು ಕಳ್ಳರನ್ನು ಕಾಪು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಧಿತರನ್ನು ಮಲ್ಲಾರು ನಿವಾಸಿ ಅಬ್ದುಲ್ ಸತ್ತಾರ್ (38) ಮತ್ತು ಕುತ್ಯಾರು ನಿವಾಸಿ ಅಬ್ದುಲ್ ರಹಮಾನ್ ಪುದಿನ್ ಯಾನೆ ರಹೀಂ (49) ಎಂದು ಗುರುತಿಸಲಾಗಿದೆ.

2012ರ ಜುಲೈ ನಲ್ಲಿ ಮಲಾರು ಗ್ರಾಮದ ಕೋಟೆ ಎಂಬಲ್ಲಿರುವ ಪರ್ವಿನ್ ಬಾಬು ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹಿಂದಿನ ಬಾಗಿಲನ್ನು ಯಾವುದೋ ಬಲವಾದ ಆಯುಧದಿಂದ ಮುರಿದು ಒಳಪ್ರವೇಶಿಸಿ ಮನೆಯ ಒಳಗೆ ಬೆಡ್ ರೂಮಿ ನಲ್ಲಿ ಗೋದ್ರೆಜ್ ನ್ನು ಕೀ ಬಳಸಿ, ಅದರ ಒಳಗೆ ಇಟ್ಟಿದ ಸುಮಾರು 2 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಹಾಗೂ ಇನ್ನೊಂದು ರೂಮಿ ನಲ್ಲಿ ರೂ. 50,000 ಮೌಲ್ಯದ  ಬಾಕ್ಸ್ ಪಾತ್ರೆ ಪರಿಕರಗಳು, ನಳ್ಳಿ ನೀರಿನ ಬೀಗ ಡೋರ್ ಲಾಕ್ ಕಳವು ಮಾಡಿಕೊಂಡು ಹೋದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಆಗಿನ ತನಿಖಾಧಿಕಾರಿಯವರು ಸದ್ಯಕ್ಕೆ ಪತ್ತೆಯಾಗದ ಪ್ರಕರಣವೆಂದು ಪರಿಗಣಿಸಿ ‘ಸಿ’ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ನಿವೇದಿಸಿಕೊಂಡಿದ್ದರು.

ಪ್ರಕರಣ ದಾಖಲಾಗಿ 08 ವರ್ಷ ಕಳೆದಿದ್ದು, ಪ್ರಸ್ತುತ ಸದ್ರಿ ಪ್ರಕರಣದ ಆರೋಪಿಗಳ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಆಬುಲ್ ಸತ್ತಾರ್, (36), ಎಂಬವನನ್ನು ಸಿಪಿಐ ಕಾಪು ವಿಚಾರಣೆ ನಡೆಸಿದ್ದು, ಆತನು ತನ್ನ ತಪ್ಪನ್ನು ಒಮ್ಮೆ ತಾನು ಹಾಗೂ ಅಬುಲ್ ರೆಹಮಾನ್ ಪಕ್ರುದ್ದೀನ್ ಯಾನೆ ರಹೀಂ ಎಂಬವರು ಇನ್ನಿಬ್ಬರು ಆರೋಪಿಗಳ ಜೊತೆ ಸೇರಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು ಆತನನ್ನು ದಸ್ತಗಿರಿ ಮಾಡಿದ್ದು, బಳಿಕಇನೋರ್ವ ಆರೋಪಿತ ಅಬ್ದುಲ್ ರೆಹಮಾನ್ ಪಕ್ರುದ್ದೀನ್ ಯಾನೆ ರಹೀಂ ನನ್ನು ದಸ್ತಗಿರಿಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಕಳವು ಮಾಡಿದ ಸೊತ್ತುಗಳಾದ ಚಿನ್ನದ ನೆಕ್ಸಸ್ ಹಾಗೂ ಚಿನ್ನದ ಬಳೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಅಂದಾಜು ಮೌಲ್ಯ ರೂ. 1,92,000/ ಆಗಿರುತ್ತದೆ
ಈ ಕಾರ್ಯಾಚರಣೆಯನ್ನು ವಿಷ್ಣುವರ್ಧನ್ ಎನ್, ಐಪಿಎಸ್, ಪೊಲೀಸ್ ಅಧೀಕ್ಷಕರು ಉಡುಪಿ ಮತ್ತು ಕುಮಾರಚಂದ್ರ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉಡುಪಿ ಮತ್ತು ಭರತ್ ಎಸ್ ರೆಡಿ, ಪೊಲೀಸ್ ಉಪಾಧೀಕ್ಷಕರು ಕಾರ್ಕಳ ಉಪವಿಭಾಗ, ಕಾರ್ಕಳ ರವರ ನಿರ್ದೇಶನದಲ್ಲಿ ಪ್ರಕಾಶ್, ವೃತ್ತ ನಿರೀಕ್ಷಕರು ಕಾಪು ವೃತ್ತ ರವರು ನಡೆಸಿದ್ದು, ಕಾಪು ಠಾಣಾ ಅಪರಾಧ ವಿಭಾಗದ ಪಿಎಸ್,ಐ, ಯುನೂಸ್ ಗಡ್ಕರ್ ಮತ್ತು ಜಿಲ್ಮಾ ಪೊಲೀಸ್ ಕಛೇರಿಯ ಅಚ್ಚುತ್ರ ನಾಗರಾಜು ಹಾಗೂ ಅಪರಾಧ ಪತ್ತೆ ತಂಡದ ಸಿಬ್ಬಂದಿಗಳಾದ ಪ್ರವೀಣ ಕುಮಾರ್, ನಾರಾಯಣ, ರಾಜೇಶ್, ಸಂದೇಶ್, ಆನಂದ ರವರು ಕಾರ್ಯಾಚರಣೆ ನಡೆಸಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

23 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

23 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

23 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago