ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/ಸಿ ಹಾಗೂ 94/ಸಿಸಿ ಅಡಿಯಲ್ಲಿ ಮಂಜೂರಾದ ಖಾಯಂ ನಿವೇಶನ ಹಕ್ಕುಪತ್ರವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಾಸಕರ ಕಚೇರಿಯಲ್ಲಿ ವಿತರಿಸಿದರು.
ಸುಮಾರು 20ಕ್ಕೂ ಅಧಿಕ ವರ್ಷಗಳಿಂದ ವಾಸವಾಗಿರುವ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಣಗುಡ್ಡೆ ನಿವಾಸಿ ಮಂಜುಳಾ ರಾಣಿ, ವಿಮಲಾ ಅಮೀನ್, ಮೂಡಬೆಟ್ಟು ಗ್ರಾಮದ ಇಂದಿರಾ ಆಚಾರ್ಯ, ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಭವಿತಾ, ಪಾದೆಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರಿಜ ಸೇರಿದಂತೆ ಒಟ್ಟು 5 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು.
ಉಡುಪಿ ಜಿಲ್ಲಾ ಪಂಚಾಯತ್ ಗ್ರಾಮಾಂತರ ಕೈಗಾರಿಕೆ ಉಪನಿರ್ದೇಶಕರು ವತಿಯಿಂದ ವೃತ್ತಿಪರ ಕುಶಲಕರ್ಮಿ ಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲ ಕರ್ಮಿಗಳಿಗೆ ಗರಿಷ್ಠ 8000ರೂ.ವರೆಗೆ ಟೈಲರಿಂಗ್, ಮರಗೆಲಸ, ಗಾರೆಕೆಲಸ, ಎಲೆಕ್ಟ್ರೀಶೀಯನ್, ಬ್ಯೂಟಿಪಾರ್ಲರ್, ಕ್ಷೌರಿಕ ವೃತ್ತಿಯವರಿಗೆ ಸೇರಿದಂತೆ ಒಟ್ಟು 81 ಫಲಾನುಭವಿಗಳಿಗೆ ಉಚಿತ ಸುಧಾರಿತ ಉಪಕರಣಗಳನ್ನು ವಿತರಿಸಲಾಯಿತು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…