ಕಾಪು: ಐಪಿಎಲ್ ಪಂದ್ಯಾಟದಲ್ಲಿ ಸಿಎಸ್ಕೆ ತಂಡ ಗೆದ್ದಿದ್ದಕ್ಕೆ ಸಂಭ್ರಮಿಸಿ ಮತ್ತು ಆರ್ಸಿಬಿ ತಂಡ ಸೋತದ್ದಕ್ಕೆ ಟ್ರೋಲ್ ಮಾಡಿ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದ ಯುವಕನಿಗೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಮಲ್ಲಾರು ಕೊಂಬಗುಡ್ಡೆಯಲ್ಲಿ ನಡೆದಿದೆ.
ಮಲ್ಲಾರು ಕೊಂಬಗುಡ್ಡೆ ನಿವಾಸಿ ವರ್ಷಿತ್ ಪೂಜಾರಿ ಐಪಿಎಲ್ ಪಂದ್ಯಾಟದಲ್ಲಿ ಸಿಎಸ್ಕೆ ತಂಡ ಗೆದ್ದಿರುವ ಬಗ್ಗೆ ತನ್ನ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದು, ಜತೆಗೆ ಆರ್ಸಿಬಿ ಟೀಮ್ ಅನ್ನು ಟ್ರೋಲ್ ಮಾಡಿ ಪೋಸ್ಟ್ ಹಾಕಿದ್ದಕ್ಕೆ ರಾಘವೇಂದ್ರ ಎಂಬಾತ ಫೋನ್ ಕರೆ ಮಾಡಿ ಆಕ್ಷೇಪಿಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದನು. ಜತೆಗೆ ವರ್ಷಿತ್ನ ತಂದೆ-ತಾಯಿ ಬಗ್ಗೆಯೂ ನಿಂದಿಸಿದ್ದು ನೀನು ನಾಳೆ ಗ್ರೌಂಡ್ಗೆ ಬಾ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದನು. ಮೇ 26ರಂದು ರಾಘವೇಂದ್ರ ಮತ್ತೆ ಕರೆ ಮಾಡಿ ನಾನು ಗ್ರೌಂಡ್ನಲ್ಲಿದ್ದೇನೆ ನೀನು ಕೂಡಲೇ ಬಾ ಎಂದು ಹೇಳಿದ್ದು ಗ್ರೌಂಡ್ಗೆ ಹೋದಾಗ ಅಲ್ಲಿ ರಾಘವೇಂದ್ರ, ಸುಧೀರ ಮತ್ತಿತರರು ಜತೆಗೂಡಿ ಆರ್ಸಿಬಿ ಟೀಂ ವಿರುದ್ಧ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕುತ್ತಿಯಾ ಎಂದು ಬೈದು ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.
ರಾಘವೇಂದ್ರ ವರ್ಷಿತ್ಗೆ ಹೊಡೆಯುತ್ತಿರುವುದನ್ನು ಕಂಡು ಗ್ರೌಂಡ್ನಲ್ಲಿ ಆಟವಾಡಲು ಬಂದಿದ್ದ ಸ್ವರೂಪ್, ವಿಕ್ಕಿ ಬರುವುದನ್ನು ಕಂಡು ಜೀವ ಬೆದರಿಕೆ ಹಾಕಿ ಅಲ್ಲಿಂದ ಹೊರಟು ಹೋಗಿದ್ದಾನೆ ಎಂದು ವರ್ಷಿತ್ ಕಾಪು ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ವರ್ಷಿತ್ನನ್ನು ಸ್ವರೂಪ್ ಮತ್ತಿತರರು ಚಿಕಿತ್ಸೆಯ ಬಗ್ಗೆ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…