ಕಾಪು: ಐಪಿಎಲ್ ಪಂದ್ಯಾಟದಲ್ಲಿ ಸಿಎಸ್ಕೆ ತಂಡ ಗೆದ್ದಿದ್ದಕ್ಕೆ ಸಂಭ್ರಮಿಸಿ ಮತ್ತು ಆರ್ಸಿಬಿ ತಂಡ ಸೋತದ್ದಕ್ಕೆ ಟ್ರೋಲ್ ಮಾಡಿ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದ ಯುವಕನಿಗೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಮಲ್ಲಾರು ಕೊಂಬಗುಡ್ಡೆಯಲ್ಲಿ ನಡೆದಿದೆ.
ಮಲ್ಲಾರು ಕೊಂಬಗುಡ್ಡೆ ನಿವಾಸಿ ವರ್ಷಿತ್ ಪೂಜಾರಿ ಐಪಿಎಲ್ ಪಂದ್ಯಾಟದಲ್ಲಿ ಸಿಎಸ್ಕೆ ತಂಡ ಗೆದ್ದಿರುವ ಬಗ್ಗೆ ತನ್ನ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದು, ಜತೆಗೆ ಆರ್ಸಿಬಿ ಟೀಮ್ ಅನ್ನು ಟ್ರೋಲ್ ಮಾಡಿ ಪೋಸ್ಟ್ ಹಾಕಿದ್ದಕ್ಕೆ ರಾಘವೇಂದ್ರ ಎಂಬಾತ ಫೋನ್ ಕರೆ ಮಾಡಿ ಆಕ್ಷೇಪಿಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದನು. ಜತೆಗೆ ವರ್ಷಿತ್ನ ತಂದೆ-ತಾಯಿ ಬಗ್ಗೆಯೂ ನಿಂದಿಸಿದ್ದು ನೀನು ನಾಳೆ ಗ್ರೌಂಡ್ಗೆ ಬಾ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದನು. ಮೇ 26ರಂದು ರಾಘವೇಂದ್ರ ಮತ್ತೆ ಕರೆ ಮಾಡಿ ನಾನು ಗ್ರೌಂಡ್ನಲ್ಲಿದ್ದೇನೆ ನೀನು ಕೂಡಲೇ ಬಾ ಎಂದು ಹೇಳಿದ್ದು ಗ್ರೌಂಡ್ಗೆ ಹೋದಾಗ ಅಲ್ಲಿ ರಾಘವೇಂದ್ರ, ಸುಧೀರ ಮತ್ತಿತರರು ಜತೆಗೂಡಿ ಆರ್ಸಿಬಿ ಟೀಂ ವಿರುದ್ಧ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕುತ್ತಿಯಾ ಎಂದು ಬೈದು ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.
ರಾಘವೇಂದ್ರ ವರ್ಷಿತ್ಗೆ ಹೊಡೆಯುತ್ತಿರುವುದನ್ನು ಕಂಡು ಗ್ರೌಂಡ್ನಲ್ಲಿ ಆಟವಾಡಲು ಬಂದಿದ್ದ ಸ್ವರೂಪ್, ವಿಕ್ಕಿ ಬರುವುದನ್ನು ಕಂಡು ಜೀವ ಬೆದರಿಕೆ ಹಾಕಿ ಅಲ್ಲಿಂದ ಹೊರಟು ಹೋಗಿದ್ದಾನೆ ಎಂದು ವರ್ಷಿತ್ ಕಾಪು ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ವರ್ಷಿತ್ನನ್ನು ಸ್ವರೂಪ್ ಮತ್ತಿತರರು ಚಿಕಿತ್ಸೆಯ ಬಗ್ಗೆ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…