Featured

ಕಾಮನ್‌ವೆಲ್ತ್ ಗೇಮ್ಸ್ – ಪವರ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸುಧೀರ್ ; ಅಭಿನಂದಿಸಿದ ಪ್ರಧಾನಿ ಮೋದಿ – Vishwanews24

ಕಾಮನ್‌ವೆಲ್ತ್ ಗೇಮ್ಸ್ – ಪವರ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸುಧೀರ್

ನವದೆಹಲಿ : ಕಾಮನ್‌ವೆಲ್ತ್ ಗೇಮ್ಸ್​ನ ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಚಿನ್ನ ಗೆದ್ದ ಸುಧೀರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಈ ಕುರಿತಂತೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿಯವರು, ಸುಧೀರ್ ಅವರಿಂದ ಕಾಮನ್​ವೆಲ್ತ್​ ಗೇಮ್ಸ್​​​ನ ಪ್ಯಾರಾ-ಸ್ಪೋರ್ಟ್ಸ್ ಪದಕಗಳ ಎಣಿಕೆಗೆ ಉತ್ತಮ ಆರಂಭವಾಗಿದೆ. ಪಂದ್ಯದಲ್ಲಿ ಚಿನ್ನ ಗೆಲ್ಲುವ ಮೂಲಕ ತಮ್ಮ ಸಪರ್ಪಣೆಯನ್ನು ತೋರಿಸಿದ್ದಾರೆ.ಅವರು ನಿರಂತರವಾಗಿ ಮೈದಾನದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಮುಂಬರುವ ಎಲ್ಲಾ ಪ್ರಯತ್ನಗಳಿಗಾಗಿ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ಬರೆದಿದ್ದಾರೆ.

ಗುರುವಾರ, ಸುಧೀರ್ ಅವರು 134.5 ಅಂಕಗಳನ್ನು ಗಳಿಸುವ ಮೂಲಕ ಅಗ್ರಸ್ಥಾನ ಪಡೆದರು. ಈ ಮೂಲಕ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ದಾಖಲೆ ಬರೆದಿದ್ದಾರೆ. ಇಕೆಚುಕ್ವು ಕ್ರಿಶ್ಚಿಯನ್ ಒಬಿಚುಕ್ವು ಒಟ್ಟು 133.6 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದರು. ಮಿಕ್ಕಿ ಯೂಲ್ ಒಟ್ಟು 130.9 ಅಂಕಗಳೊಂದಿಗೆ ಕಂಚಿನೊಂದಿಗೆ ಪಂದ್ಯವನ್ನು ಮುಗಿಸಿದರು.

2013 ರಲ್ಲಿ, ಸುಧೀರ್ ಸೋನಿಪತ್‌ನಲ್ಲಿ ಪವರ್‌ಲಿಫ್ಟಿಂಗ್‌ ಪ್ರಾರಂಭಿಸಿದರು. ಅಂದಿನಿಂದ ಮುನ್ನೆಡೆಯುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ, ಜೂನ್‌ನಲ್ಲಿ, ಅವರು ದಕ್ಷಿಣ ಕೊರಿಯಾದಲ್ಲಿ ನಡೆದ ವಿಶ್ವ ಪ್ಯಾರಾ ಪವರ್‌ಲಿಫ್ಟಿಂಗ್ ಏಷ್ಯಾ-ಓಷಿಯಾನಿಯಾ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ 88 ಕೆಜಿ ವರೆಗೆ ಕಂಚಿನ ಪದಕವನ್ನು ಗೆದ್ದಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago