Featured

ಕಾಮನ್‌ವೆಲ್ತ್ ಗೇಮ್ಸ್ – ಪವರ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸುಧೀರ್ ; ಅಭಿನಂದಿಸಿದ ಪ್ರಧಾನಿ ಮೋದಿ – Vishwanews24

ಕಾಮನ್‌ವೆಲ್ತ್ ಗೇಮ್ಸ್ – ಪವರ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸುಧೀರ್

ನವದೆಹಲಿ : ಕಾಮನ್‌ವೆಲ್ತ್ ಗೇಮ್ಸ್​ನ ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಚಿನ್ನ ಗೆದ್ದ ಸುಧೀರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಈ ಕುರಿತಂತೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿಯವರು, ಸುಧೀರ್ ಅವರಿಂದ ಕಾಮನ್​ವೆಲ್ತ್​ ಗೇಮ್ಸ್​​​ನ ಪ್ಯಾರಾ-ಸ್ಪೋರ್ಟ್ಸ್ ಪದಕಗಳ ಎಣಿಕೆಗೆ ಉತ್ತಮ ಆರಂಭವಾಗಿದೆ. ಪಂದ್ಯದಲ್ಲಿ ಚಿನ್ನ ಗೆಲ್ಲುವ ಮೂಲಕ ತಮ್ಮ ಸಪರ್ಪಣೆಯನ್ನು ತೋರಿಸಿದ್ದಾರೆ.ಅವರು ನಿರಂತರವಾಗಿ ಮೈದಾನದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಮುಂಬರುವ ಎಲ್ಲಾ ಪ್ರಯತ್ನಗಳಿಗಾಗಿ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ಬರೆದಿದ್ದಾರೆ.

ಗುರುವಾರ, ಸುಧೀರ್ ಅವರು 134.5 ಅಂಕಗಳನ್ನು ಗಳಿಸುವ ಮೂಲಕ ಅಗ್ರಸ್ಥಾನ ಪಡೆದರು. ಈ ಮೂಲಕ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ದಾಖಲೆ ಬರೆದಿದ್ದಾರೆ. ಇಕೆಚುಕ್ವು ಕ್ರಿಶ್ಚಿಯನ್ ಒಬಿಚುಕ್ವು ಒಟ್ಟು 133.6 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದರು. ಮಿಕ್ಕಿ ಯೂಲ್ ಒಟ್ಟು 130.9 ಅಂಕಗಳೊಂದಿಗೆ ಕಂಚಿನೊಂದಿಗೆ ಪಂದ್ಯವನ್ನು ಮುಗಿಸಿದರು.

2013 ರಲ್ಲಿ, ಸುಧೀರ್ ಸೋನಿಪತ್‌ನಲ್ಲಿ ಪವರ್‌ಲಿಫ್ಟಿಂಗ್‌ ಪ್ರಾರಂಭಿಸಿದರು. ಅಂದಿನಿಂದ ಮುನ್ನೆಡೆಯುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ, ಜೂನ್‌ನಲ್ಲಿ, ಅವರು ದಕ್ಷಿಣ ಕೊರಿಯಾದಲ್ಲಿ ನಡೆದ ವಿಶ್ವ ಪ್ಯಾರಾ ಪವರ್‌ಲಿಫ್ಟಿಂಗ್ ಏಷ್ಯಾ-ಓಷಿಯಾನಿಯಾ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ 88 ಕೆಜಿ ವರೆಗೆ ಕಂಚಿನ ಪದಕವನ್ನು ಗೆದ್ದಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

5 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

5 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

5 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

5 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago