ಬರ್ಮಿಂಗಂ: ಇಂಗ್ಲೆಂಡ್ ನ ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಪುರುಷರ ಲಾಂಗ್ ಜಂಪ್ ನಲ್ಲಿ ಭಾರತದ ಮುರಳಿ ಶ್ರೀಶಂಕರ್ ಅವರು ರಜತ ಪದಕ ಗೆದ್ದುಕೊಂಡಿದ್ದಾರೆ.
8.08 ಮೀಟರ್ ಜಂಪ್ ಮಾಡಿದ ಮುರಳಿ ಶ್ರೀಶಂಕರ್ ಮೊದಲ ಬಾರಿಗೆ ಕಾಮನ್ವೆಲ್ತ್ ಪದಕ ಗೆದ್ದರು.
ಮುರಳಿ ಶ್ರೀಶಂಕರ್ ಗೆ ಚಿನ್ನ ಗೆಲ್ಲುವ ಅವಕಾಶವಿತ್ತು. ಚಿನ್ನದ ಪದಕ ಗೆದ್ದ ಬಹಾಮಾಸ್ ನ ಲಕ್ವಾನ್ ನಾಯರ್ನ್ ಕೂಡಾ 8.08 ಮೀಟರ್ ಜಂಪ್ ಮಾಡಿದ್ದರು. ನಿಯಮದ ಪ್ರಕಾರ ಇಬ್ಬರ ಬೆಸ್ಟ್ ಜಂಪ್ ಟೈ ಆದರೆ ಅವರ ಸೆಕೆಂಡ್ ಬೆಸ್ಟ್ ಜಂಪ್ ಆಧಾರದಲ್ಲಿ ವಿಜೇತರನ್ನು ಘೋಷಣೆ ಮಾಡಲಾಗುತ್ತದೆ. ಅದರಂತೆ ಮುರಳಿ ಶ್ರೀಶಂಕರ್ ಅವರ ಸೆಕೆಂಡ್ ಬೆಸ್ಟ್ ಜಂಪ್ 7.84 ಆಗಿದ್ದರೆ, ಲಕ್ವಾನ್ ನಾಯರ್ನ್ ಅವರು 7.98 ಮೀ ಜಿಗಿದಿದ್ದರು. ಹೀಗಾಗಿ ಅವರಿಗೆ ಸ್ವರ್ಣ ಪದಕ ಪ್ರಾಪ್ತವಾಯಿತು.
ದಕ್ಷಿಣ ಆಫ್ರಿಕಾದ ಜೋವನ್ ವ್ಯಾನ್ ವುರೆನ್ 8.06 ಮೀ ಜಂಪ್ ನೊಂದಿಗೆ ಕಂಚು ಗೆದ್ದರು. ಭಾರತದ ಮತ್ತೋರ್ವ ಅಥ್ಲೀಟ್ ಮೊಹಮ್ಮದ್ ಅನೀಸ್ ಯಹಿಯಾ ಅವರು 7.97 ಮೀಟರ್ ಜಂಪ್ ನೊಂದಿಗೆ ಐದನೇ ಸ್ಥಾನ ಪಡೆದರು.
ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪುರುಷ ಲಾಂಗ್ ಜಂಪರ್ ಗಳಲ್ಲಿ ಮುರಳಿ ಶ್ರೀಶಂಕರ್ ಅವರ ಬೆಳ್ಳಿ ಅತ್ಯುತ್ತಮ ಪ್ರದರ್ಶನವಾಗಿದೆ. ಈ ಹಿಂದೆ 1978ರಲ್ಲಿ ಸುರೇಶ್ ಬಾಬು ಕಂಚು ಗೆದ್ದಿದ್ದೆ ಇದುವರೆಗಿನ ಅತ್ಯುತ್ತಮ ಪ್ರದರ್ಶನವಾಗಿದೆ.
ಮಹಿಳೆಯರಲ್ಲಿ ಪ್ರಜೂಷಾ ಮಲಿಯಕ್ಕಲ್ 2010ರಲ್ಲಿ ದೆಹಲಿಯಲ್ಲಿ ಬೆಳ್ಳಿ ಗೆದ್ದರೆ, 2002ರಲ್ಲಿ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…