Featured

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ

ಗ್ಲಾಸ್ಕೊ : ಪುರುಷರ ಹೆವಿವೇಯ್ಟ್‌ ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಪೋಲಿಯೊ ಪೀಡಿತ ಝಂದು ಕುಮಾರ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಈ ಮೂಲಕ ಶುಕ್ರವಾರ ಆರಂಭವಾಗಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಖಾತೆ ಓಪನ್‌ ಆಗಿದೆ. ಪೋಲಿಯೊ ಪೀಡಿತ ಝಂದು ಕುಮಾ‌ರ್ (28) ಅವರು ಮೊದಲ ಪ್ರಯತ್ನದಲ್ಲಿ 181 ಕೆ.ಜಿ, 2ನೇ ಪ್ರಯತ್ನದಲ್ಲಿ 190 ಕೆ.ಜಿ ತೂಕವನ್ನು ಯಶಸ್ವಿಯಾಗಿ ಎತ್ತಿದರು. ಆದ್ರೆ ಮೂರನೇ ಪ್ರಯತ್ನದಲ್ಲಿ 196 ಕೆ.ಜಿ ತೂಕ ಎತ್ತುವಲ್ಲಿ ವಿಫಲರಾದ ಹಿನ್ನೆಲೆ ಒಟ್ಟು 130.9 ಪಾಯಿಂಟ್‌ಗಳೊಂದಿಗೆ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ನೈಜೀರಿಯಾದ ಇಡ್ರಿಸ್ ರಿಲುವಾನ್ 132.8 ಪಾಯಿಂಟ್‌ಗಳೊಂದಿಗೆ ಚಿನ್ನ, ಬ್ರಿಟನ್‌ನ ಮ್ಯಾಥ್ಯ ಹಾರ್ಡಿಂಗ್ 131 ಪಾಯಿಂಟ್ ಗಳಿಸುವ ಮೂಲಕ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಇದೇ ಸ್ಪರ್ಧೆಯಲ್ಲಿದ್ದ ಭಾರತದ ಮತ್ತೊಬ್ಬ ಕ್ರೀಡಾಪಟು ಸುಧೀರ್ ಅವರು 114.1 ಪಾಯಿಂಟ್‌ಗಳೊಂದಿಗೆ 6ನೇ ಸ್ಥಾನ ಪಡೆದರು.

ಕ್ರೀಡಾಕೂಟದ ಮೊದಲ ದಿನ ಪ್ಯಾರಾ ಪವರ್‌ಲಿಫ್ಟರ್‌ ಅಶೋಕ್‌ ಮಲಿಕ್‌ ಅವರು 4ನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕದಿಂದ ವಂಚಿತರಾದರು.

Vishwa News 24

Recent Posts

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

24 minutes ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 hours ago

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ – vishwanews24

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ ಮಂಗಳೂರು: ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನೇ ರಾಜಕೀಯ…

2 hours ago

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR – vishwanews24

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR ಚಿಕ್ಕಮಗಳೂರು: ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ…

2 hours ago

‘ಬಿಪಿಎಲ್ ಪಡಿತರ ಚೀಟಿ’ ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ : ಸಚಿವ ಕೆ.ಎಚ್.ಮುನಿಯಪ್ಪ – vishwanews24

BPL ಕಾರ್ಡ್‌ ಕುರಿತು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ    ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ…

2 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು – vishwanews24

ಬೆಳ್ತಂಗಡಿ:  ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು ಬೆಳ್ತಂಗಡಿ,: ಭಾರೀ ಮಳೆ ಹಾಗೂ…

3 hours ago