ಉಡುಪಿ: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವಿಜಯ ಯಾತ್ರೆ ಆರಂಭವಾಗಿದೆ. ಭಾರತದ ಮೊದಲ ಪದಕ ಕರ್ನಾಟಕದ ಉಡುಪಿಗೆ ಬಂದಿದೆ. ವೇಟ್ ಲಿಫ್ಟಿಂಗ್ ನಲ್ಲಿ ಕುಂದಾಪುರದ ಗುರುರಾಜ್ ಪೂಜಾರಿ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.
ಈ ಕುರಿತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮೊದಲು ಗುರುರಾಜ್ ಅವರಿಗೆ ಅಭಿನಂದನೆ ಸಲ್ಲಿಸಿದ್ರು. ಬಳಿಕ ಇದಕ್ಕಿಂತ ಸಂತೋಷದ ಕ್ಷಣ ನನಗೆ ಬೇರೆ ಇಲ್ಲ. ತಿಂಗಳ ಹಿಂದಷ್ಟೇ ಏಕಲವ್ಯ ಪ್ರಶಸ್ತಿ ನೀಡಲಾಗಿತ್ತು. ಕಾಮನ್ ವೆಲ್ತ್ ಪ್ರಶಸ್ತಿ ಗೆದ್ದ ಗುರುರಾಜ್ ಗೆ ಸರ್ಕಾರದ ಗ್ರೂಪ್ ಬಿ ಉದ್ಯೋಗ ಸಿಗುತ್ತದೆ. ಜೊತೆಗೆ 25 ಲಕ್ಷ ರೂಪಾಯಿ ಬಹುಮಾನ ಮೊತ್ತ ಸಿಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕ್ರೀಡಾನೀತಿ ಈಗಾಗಲೇ ಘೋಷಣೆ ಮಾಡಲಾಗಿದೆ. ಸರ್ಕಾರದ ನೇಮಕಾತಿಯಲ್ಲಿ ಮೀಸಲಾತಿ ಇದೆ. 48 ಕೋಟಿ ರೂಪಾಯಿ ಈಗಾಗಲೇ ಮೀಸಲಿಟ್ಟು ವಿತರಿಸಲಾಗಿದೆ. ಈಗ ಕಾನೂನಿನ ಅನ್ವಯ ಮೊತ್ತ ಮತ್ತು ಸರ್ಕಾರಿ ಕೆಲಸ ಸಿಗುತ್ತದೆ ಅಂದ್ರು.
ಖೇಲೋ ಇಂಡಿಯಾದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಕ್ರೀಡಾಪಟುಗಳ ಬೆಂಬಲಕ್ಕೆ ಸರ್ಕಾರ ಸಿದ್ಧವಿದೆ. ಒಲಿಂಪಿಕ್ಸ್ ನಲ್ಲಿ ನಮ್ಮ ಕ್ರೀಡಾಪಟುಗಳು ಸಾಧನೆ ಮಾಡಬೇಕಿದೆ, ಇದಕ್ಕೆ ಒಂದು ದಿನದ ಪರಿಶ್ರಮ ಸಾಲದು. ನಿರಂತರ ಶ್ರಮಕ್ಕೆ ಅಡಿಗಲ್ಲು ಹಾಕಲಾಗಿದೆ. ಬಡವರ- ಮಧ್ಯಮ ವರ್ಗದ ಕುಟುಂಬದಿಂದ ಬಂದ ಗುರುರಾಜ್ ಪೂಜಾರಿಯಂತವರಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ನುಡಿದ್ರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…