ಉಡುಪಿ: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವಿಜಯ ಯಾತ್ರೆ ಆರಂಭವಾಗಿದೆ. ಭಾರತದ ಮೊದಲ ಪದಕ ಕರ್ನಾಟಕದ ಉಡುಪಿಗೆ ಬಂದಿದೆ. ವೇಟ್ ಲಿಫ್ಟಿಂಗ್ ನಲ್ಲಿ ಕುಂದಾಪುರದ ಗುರುರಾಜ್ ಪೂಜಾರಿ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.
ಈ ಕುರಿತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮೊದಲು ಗುರುರಾಜ್ ಅವರಿಗೆ ಅಭಿನಂದನೆ ಸಲ್ಲಿಸಿದ್ರು. ಬಳಿಕ ಇದಕ್ಕಿಂತ ಸಂತೋಷದ ಕ್ಷಣ ನನಗೆ ಬೇರೆ ಇಲ್ಲ. ತಿಂಗಳ ಹಿಂದಷ್ಟೇ ಏಕಲವ್ಯ ಪ್ರಶಸ್ತಿ ನೀಡಲಾಗಿತ್ತು. ಕಾಮನ್ ವೆಲ್ತ್ ಪ್ರಶಸ್ತಿ ಗೆದ್ದ ಗುರುರಾಜ್ ಗೆ ಸರ್ಕಾರದ ಗ್ರೂಪ್ ಬಿ ಉದ್ಯೋಗ ಸಿಗುತ್ತದೆ. ಜೊತೆಗೆ 25 ಲಕ್ಷ ರೂಪಾಯಿ ಬಹುಮಾನ ಮೊತ್ತ ಸಿಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕ್ರೀಡಾನೀತಿ ಈಗಾಗಲೇ ಘೋಷಣೆ ಮಾಡಲಾಗಿದೆ. ಸರ್ಕಾರದ ನೇಮಕಾತಿಯಲ್ಲಿ ಮೀಸಲಾತಿ ಇದೆ. 48 ಕೋಟಿ ರೂಪಾಯಿ ಈಗಾಗಲೇ ಮೀಸಲಿಟ್ಟು ವಿತರಿಸಲಾಗಿದೆ. ಈಗ ಕಾನೂನಿನ ಅನ್ವಯ ಮೊತ್ತ ಮತ್ತು ಸರ್ಕಾರಿ ಕೆಲಸ ಸಿಗುತ್ತದೆ ಅಂದ್ರು.
ಖೇಲೋ ಇಂಡಿಯಾದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಕ್ರೀಡಾಪಟುಗಳ ಬೆಂಬಲಕ್ಕೆ ಸರ್ಕಾರ ಸಿದ್ಧವಿದೆ. ಒಲಿಂಪಿಕ್ಸ್ ನಲ್ಲಿ ನಮ್ಮ ಕ್ರೀಡಾಪಟುಗಳು ಸಾಧನೆ ಮಾಡಬೇಕಿದೆ, ಇದಕ್ಕೆ ಒಂದು ದಿನದ ಪರಿಶ್ರಮ ಸಾಲದು. ನಿರಂತರ ಶ್ರಮಕ್ಕೆ ಅಡಿಗಲ್ಲು ಹಾಕಲಾಗಿದೆ. ಬಡವರ- ಮಧ್ಯಮ ವರ್ಗದ ಕುಟುಂಬದಿಂದ ಬಂದ ಗುರುರಾಜ್ ಪೂಜಾರಿಯಂತವರಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ನುಡಿದ್ರು.
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…