ಕಟಕ್: ಕಟಕ್ ನಲ್ಲಿ ನಡೆಯುತ್ತಿರುವ 21ನೇ ಕಾಮನ್ ವೆಲ್ತ್ ಟೆಬಲ್ ಟೆನಿಸ್ ಚಾಂಪಿಯನ್ ಶಿಪ್ ನಲ್ಲಿ ಟೂರ್ನಿಯ ಎಲ್ಲ ಏಳೂ ಚಿನ್ನದ ಪದಕಗಳನ್ನು ಗೆದ್ದು ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದೆ.
ಜವಹರ್ ಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಹರ್ಮೀತ್ ದೇಸಾಯಿ ಮತ್ತು ಸಥಿಯಾನ್ ಜ್ಞಾನ ಶೇಖರನ್ ಅವರು ಪುರುಷರ ಸಿಂಗಲ್ಸ್ ಫೈನಲ್ ವಿಭಾಗದಲ್ಲಿ ಗೆದ್ದು ಚಿನ್ನದ ಪದಕಕ್ಕೆ ಮುತ್ತಿಟ್ಟರು. ಅಂತೆಯೇ ಪುರುಷರ ಡಬಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲೂ ಮ್ಯಾಜಿಕ್ ಮಾಡಿದ ಸಥಿಯಾನ್ ಜ್ಞಾನ ಶೇಖರನ್ ಮತ್ತು ಶರತ್ ಕಮಲ್ ಜೋಡಿ ಚಿನ್ನದ ಪದಕಕ್ಕೆ ಭಾಜನರಾದರು.
ಇನ್ನು ಮಹಿಳೆಯರ ವಿಭಾಗದ ಸಿಂಗಲ್ಸ್ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿದ ಐಹಿಕಾ ಮುಖರ್ಜಿ ಚಿನ್ನ ಗೆದ್ದರೆ, ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಪೂಜಾ ಸಹಸ್ರಬುದ್ಧೆ ಮತ್ತು ಕೃತ್ವಿಕಾ ಸಿನ್ಹಾ ರಾಯ್ ಅವರು ಚಿನ್ನದ ಪದಕ ಗೆದ್ದರು.
ಆ ಮೂಲಕ ಚಾಂಪಿಯನ್ ಶಿಪ್ ನಲ್ಲಿ ಭಾರತ 7 ಬಂಗಾರ, 5 ಬೆಳ್ಳಿ, 3 ಕಂಚುಗಳನ್ನು ಪಡೆದು ಬೀಗಿದೆ. ಇಂಗ್ಲೆಂಡ್ 2 ಬೆಳ್ಳಿ, 3 ಕಂಚು ಪಡೆದರೆ, ಸಿಂಗಾಪುರ್ 6 ಕಂಚಿನ ಪದಕದ ಸಾಧನೆ ಮಾಡಿದೆ.
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…