ನವದೆಹಲಿ: ಅನಾರೋಗ್ಯದ ಕಾರಣ ನೀಡಿ ಸಾಮೂಹಿಕ ರಜೆ ಹಾಕಿದ್ದ ಕನಿಷ್ಠ 25 ಸಿಬ್ಬಂದಿಯನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ವಜಾಗೊಳಿಸಿದೆ.
ಏರ್ಲೈನ್ನ ಸುಮಾರು 300 ಉದ್ಯೋಗಿಗಳು ಅನಾರೋಗ್ಯದ ಕಾರಣ ನೀಡಿ ಕರ್ತವ್ಯಕ್ಕೆ ಗೈರಾಗಿದ್ದರು. ಫೋನ್ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದರು. ಇದು ದೊಡ್ಡ ಪ್ರಮಾಣದ ವಿಮಾನಯಾನ ಅಡೆತಡೆಗಳಿಗೆ ಕಾರಣವಾಯಿತು.
ಸಿಬ್ಬಂದಿ ಸಾಮೂಹಿಕ ರಜೆಯಿಂದ 76 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇದರಿಂದ ಸಾಕಷ್ಟು ಸಮಸ್ಯೆಯಾಗಿತ್ತು. ವಜಾಗೊಳ್ಳುವ ಸಿಬ್ಬಂದಿ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮ್ಯಾನೇಜ್ಮೆಂಟ್ ಇಂದು ಕ್ಯಾಬಿನ್ ಸಿಬ್ಬಂದಿ ಸದಸ್ಯರೊಂದಿಗೆ ಟೌನ್ಹಾಲ್ ಸಭೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
‘ಯಾವುದೇ ಸಮರ್ಥನೀಯ ಕಾರಣವಿಲ್ಲದೆ ರಜೆ ಹಾಕಿರುವುದು ತಿಳಿದುಬಂದಿದೆ’ ಎಂದು 25 ಸಿಬ್ಬಂದಿಯನ್ನು ವಜಾಗೊಳಿಸಿರುವ ಬಗ್ಗೆ ಏರ್ಲೈನ್ ಸ್ಪಷ್ಟನೆ ನೀಡಿದೆ.
ಹೆಚ್ಚಿನ ಸಂಖ್ಯೆಯ ವಿಮಾನಗಳನ್ನು ರದ್ದುಗೊಳಿಸಬೇಕಾಗಿತ್ತು. ಇದರಿಂದಾಗಿ ಸಂಪೂರ್ಣ ವೇಳಾಪಟ್ಟಿ ಬದಲಾಯಿತು. ಇದು ಕಂಪನಿಯ ಗೌರವಾನ್ವಿತ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡಿತು. ನಿಮ್ಮ ಕಾರ್ಯವು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಕಂಪನಿಗೆ ತೀವ್ರ ಮುಜುಗರವಾಗಿದ್ದಲ್ಲದೇ ಹಣಕಾಸು ನಷ್ಟ ಕೂಡ ಆಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…