ಉಡುಪಿ: “ಕಾರಣ ಇಲ್ಲದ ಹಿಂಸಾಚಾರಗಳಲ್ಲಿ ಅಮಾಯಕ ಜನ ಸಾವನ್ನಪ್ಪಿದಾಗ ನೋವಾಗುತ್ತದೆ ಎಂದು ಸಹಬಾಳ್ವೆ ಸಂಘಟನೆಯ ಅಧ್ಯಕ್ಷ್ಯರಾದ ಅಮೃತ್ ಶೆಣೈ ಹೇಳಿದರು.
ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನು ವಿರೋಧಿಸಿ ಸಹಬಾಳ್ವೆ ಉಡುಪಿ ವತಿಯಿಂದ ಉಡುಪಿಯಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. “ಸಂಸತ್ತಿನಲ್ಲಿ ಯಾವುದೇ ಚರ್ಚೆಯನ್ನು ಮಾಡದೇ ಪೌರತ್ವ ಕಾಯಿದೆಯನ್ನು ಈ ಸರಕಾರ ಜಾರಿಗೆ ತಂದಿದೆ. ಭಾರತದಲ್ಲಿ ಹಲವಾರು ದೇಶಗಳ ವಲಸಿಗರು ಇದ್ದಾರೆ. ಆದರೆ ಈ ಕಾಯಿದೆಯಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟು ಪೌರತ್ವವನ್ನು ನೀಡುವ ವಿಚಾರ ಇದರಲ್ಲಿ ಇದೆ. ನಮ್ಮ ದೇಶದ ನಿರ್ಮಾತೃರು ಧರ್ಮ ನಿರಪೇಕ್ಷ ದೇಶವನ್ನು ಮಾಡಿದ್ದಾರೆ. ನರೇಂದ್ರ ಮೋದಿಯ ಸರಕಾರ ಒಂದು ಧರ್ಮದವರಿಗೆ ನೋವುಂಟು ಮಾಡಿ ಮತ್ತೊಂದು ಧರ್ಮದವರನ್ನು ಓಲೈಸುವ ಉದ್ದೇಶದಿಂದ ಈ ಕಾಯಿದೆಯನ್ನು ತಂದಿದೆ ಎಂದರು.
ಇನ್ನು ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಯುತ್ತಿರುವ ಸಂಧರ್ಭದಲ್ಲಿ ಕಿಡೆಗೇಡಿಗಳು ಪಿಸ್ತೂಲ್ ಹಿಡಿದುಕೊಂಡು ಬರುತ್ತಾರೆ, ಆದರೆ ಪೋಲಿಸರು ಅವರನ್ನು ಬಂಧಿಸುವುದಿಲ್ಲ. ಯಾವುದೇ ರಾಜಕೀಯ ಪಕ್ಷ,ಸಂಘಟನೆಗಳಲ್ಲಿ ಇಲ್ಲದ ಅಮಾಯಕ ಜನ ಇಂತಹ ದಂಗೆಗಳಲ್ಲಿ ಸಾಯುವಾಗ ನೋವಾಗುತ್ತದೆ. ದೆಹಲಿಯಲ್ಲಿ ಜಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೋಲಿಸರು ಹಲ್ಲೆ ಮಾಡುವುದನ್ನು ಕಂಡಿದ್ದೇವೆ. ಲೈಬ್ರೆರಿಗೆ ನುಗ್ಗಿ ಮಾರಕಾಸ್ತ್ರಗಳಿಂದ ವಿದ್ಯಾರ್ಥಿಗಳನ್ನು ತಳಿಸುತ್ತಾರೆ. ಸಿಸಿಟಿವಿಯನ್ನು ನಾಶ ಪಡಿಸುತ್ತಾರೆ. ಇವತ್ತೂ ಇಡೀ ಪ್ರಪಂಚ ಇದನ್ನು ಕಂಡಿದೆ. ಕೆಲವೇ ದಿನಗಳ ನಂತರ ದೆಹಲಿಯಲ್ಲಿ ಕೋಮು ಗಲಭೆ ಉಂಟಾಗುತ್ತದೆ. ಮಂಗಳೂರಿನ ಗೋಲಿಭಾರ್ ನಲ್ಲಿ ಸತ್ತ ಇಬ್ಬರ ಕುಟುಂಬಗಳಿಗೆ ಮುಖ್ಯಮಂತ್ರಿಗಳು ತಲಾ 25 ಲಕ್ಷ ರುಪಾಯಿ ಪರಿಹಾರವನ್ನು ಘೋಷಿಸಬೇಕು ಎಂದರು.
₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್ ಆಗಿ ಲೋಕಾರ್ಪಣೆ!…
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…