ಕಾರವಾರ: ಮನೆಯಲ್ಲಿ ಎಂದಿನಂತೆ ಊಟ ಮಾಡುತ್ತಿದ್ದಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.
ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, 38 ವರ್ಷದ ಅಮಿತ್ ಮಾಳಸೇರ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲಕರಾಗಿ ಜೀವನ ಸಾಗಿಸುತ್ತಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು. ತಮ್ಮ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಅಮಿತ್ ಊಟ ಮಾಡುವಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ತೀವ್ರ ಉಸಿರಾಟದ ತೊಂದರೆ ಅನುಭವಿಸಿದ್ದಾರೆ. ತಕ್ಷಣವೇ ಮನೆಯವರು ನೀರು ಕುಡಿಸಲು ಪ್ರಯತ್ನಿಸಿದರೂ, ಅದು ಫಲಕಾರಿಯಾಗದೆ ಅಮಿತ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಅವರನ್ನು ಕಾರವಾರದ ಕ್ರಿಮ್ಸ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ವೈದ್ಯರು ಪರೀಕ್ಷಿಸಿದಾಗ ಅಮಿತ್ ಈಗಾಗಲೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…