Featured

ಕಾರವಾರ:  ಕಾಳಿ ಸೇತುವೆ ತಡೆಗೋಡೆ ಮೇಲೆ ಕಬ್ಬಿಣದ ದೊಡ್ಡ ಪೈಪ್ ಗಳಿಂದ ಎತ್ತರಕ್ಕೆ ಮಾಡಲು ಜಿಲ್ಲಾಧಿಕಾರಿಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರ ಮನವಿ – vishwanews24

ಕಾಳಿ ಸೇತುವೆ ತಡೆಗೋಡೆ ಮೇಲೆ ಕಬ್ಬಿಣದ ದೊಡ್ಡ ಪೈಪ್ ಗಳಿಂದ ಎತ್ತರಕ್ಕೆ ಮಾಡಲು ಜಿಲ್ಲಾಧಿಕಾರಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕಾರವಾರ ಘಟಕ )ಅಧ್ಯಕ್ಷರ ಮನವಿ

ಕಾರವಾರ:  ರಾಷ್ಟ್ರೀಯ ಹೆದ್ದಾರಿಯ  ಕೋಡಿಭಾಗ ಕಾಳಿ ನೂತನ ಸೇತುವೆಯ ಬದಿಯಲ್ಲಿರುವ  ಈ ತಡೆಗೋಡೆ ಸ್ವಲ್ಪ ಎತ್ತರಕ್ಕೆ ಏರಿಸಬೇಕೇಂದು ಆಗ್ರಹಿಸಿ  ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕ ಅವರು ಉತ್ತರಕನ್ನಡ ಜಿಲ್ಲಾಧಿಕಾರಿಗೆ ವಾಟ್ಸಾಪ್ ಹಾಗೂ ಇಮೇಲ್ ಮೂಲಕ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಹೆದ್ದಾರಿ 66 ರ ಕಾರವಾರ ಗೋವಾ ಮಾರ್ಗದ ಕಾರವಾರ ನಗರದ  ಹೊರವಲಯದಲ್ಲಿರುವ ಕಾಳಿ ಹಳೆಯ ಸೇತುವೆ ಕೆಲವು ದಿನಗಳ ಹಿಂದೆ ಮುರಿದು ಬಿದ್ದ ಕಾರಣ ಪಕ್ಕದ ನೂತನ ಸೇತುವೆ ಮೇಲಿಂದ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದನ್ನು ಬಿಟ್ಟರೆ ಬೇರೇನೂ ಸಧ್ಯ ಮಾಡಲು ಸಾಧ್ಯವಿಲ್ಲ.ಆದರೆ   ಪಾದಚಾರಿಗಳಿಗೆ ಸೈಕಲ್ ಬೈಕ್ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬಂತಾಗಿದೆ. ಏಕೆಂದರೆ  ಕಾರು ಲಾರಿ ಖಾಸಗಿ ವಾಹನ ಚಾಲಕರು ವೇಗವಾಗಿ  ಸೇತುವೆಯ ಮೇಲಿಂದ ತಮ್ಮ ವಾಹನಗಳನ್ನು ಓಡಿಸುತ್ತಿದ್ದಾರೆ.  ಇದರಿಂದಾಗಿ ಸೈಕಲ್ ಬೈಕ್ ಕಿರು ವಾಹನ ಓಡಿಸುವರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಅಷ್ಟೆಯಲ್ಲದೇ ಸೇತುವೆ ದಾಟುವ ಪಾದಚಾರಿಗಳು   ಶಾಲೆಗೆ ತೆರಳುವ ಮಕ್ಕಳು ಕೂಡಾ ತಂತಿ ಮೇಲಿನ ದಾರಿ ಎಂಬಂತೆ ಪ್ರಯಾಣ ಮಾಡುತ್ತಿದ್ದಾರೆ. ಮತ್ತು ಈ ಸೇತುವೆಯ ಎರಡೂ ಕಡೆಯಿಂದ ಓಡಾಡುವ ಎಲ್ಲಾ ವಾಹನಗಳು ವೇಗದ ಮಿತಿ ಕಡಿಮೆ ಮಾಡದೇ ತುಂಬಾ ವೇಗವಾಗಿ ಚಲಿಸುತ್ತಿದ್ದಾರೆ. ಇದ್ದರಿಂದ  ತೀವ್ರ ಇಕ್ಕಟ್ಟಾದ ಕಾಳಿ ಸೇತುವೆಯ ಮೇಲೆ  ಸೈಕಲ್ ಬೈಕ್ ತಡೆಗೋಡೆಗೆ ಬದ್ದರೆ   ಕಾಳಿ ನದಿಯ ಕೆಳಗಿನ ಆಳ ಕಾಣುತ್ತದೆ. ಅಷ್ಟೆಯಲ್ಲದೇ ಬಾರಿ ಗಾಳಿ ಮಳೆ ಸುರಿಯುತ್ತಿರುವಾಗ  ಹೆದರಿಕೆ ಆಗುತ್ತಿದೆ. ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್ ಬಿ ಕಂಪನಿಯವರು ಕೂಡಾ ನೂತನ ಸೇತುವೆಯ ಕುರಿತು ಎಚ್ಚೆತ್ತುಕೊಳ್ಳಬೇಕು.    ಈ ಸೇತುವೆಯ ತಡೆಗೋಡೆ ಚಿಕ್ಕದಾಗಿದ್ದು  ಮುಖ್ಯ ಕಾರಣವಾಗಿದ್ದಲ್ಲದೇ  ಈ ಸೇತುವೆ ಭವಿಷ್ಯದಲ್ಲಿ ಒನ್ ವೇವ್ ಗೆ ಮಾತ್ರ ಐ ಆರ್ ಬಿ ಕಂಪನಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮಾಡಿದಂತಿದೆ.ಈ ಸೇತುವೆಯ ತಡೆಗೋಡೆ ಮಾನವನ ಸೊಂಟದ ಮಟ್ಟದಲ್ಲಿ ಇದೆ. ಆದ್ದರಿಂದ ಈ ನೂತನ ಸೇತುವೆ ತಡೆಗೋಡೆ ಸ್ವಲ್ಪ ಎತ್ತರ ಮಾಡಬೇಕಾಗಿದೆ.

ಸಧ್ಯ ಮಟ್ಟಿಗೆ  ತಡೆಗೋಡೆ ಮೇಲೆ ಕಬ್ಬಿಣದ ದೊಡ್ಡ ಪೈಪ್ ಗಳಿಂದ ತಡೆಗೋಡೆ ಎತ್ತರಕ್ಕೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡುತ್ತೇವೆ.ಆದ್ದರಿಂದ  ಮತ್ತೊಂದು ದಿನ ಆಗುವ ಅಪಾಯ ತಪ್ಪಿಸಬೇಕಾಗಿದೆ. ಎಂದು  ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕ ಅವರು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago