ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಅನಿಲ ಸೋರಿಕೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-52ರ ಕಂಚಿನ ಬಾಗಿಲು ಬಳಿ ನಡೆದಿದೆ.
ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯವಾಗಿದೆ. ಗುಜರಾತ್ನಿಂದ ಉಡುಪಿ ಕಡೆಗೆ ಹೋಗುತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಟ್ಯಾಂಕರ್ ನಲ್ಲಿ ಇದ್ದ ಗ್ಯಾಸ್ ಲೀಕ್ ಆಗಿದೆ.
ಗಂಭೀರ ಗಾಯಗೊಂಡ ಗ್ಯಾಸ್ ಟ್ಯಾಂಕರ್ ಚಾಲಕ ಅರುಣ್ ಶೇಖ್ (57) ನನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಗ್ಯಾಸ್ ಟ್ಯಾಂಕರ್ ನಲ್ಲಿ ಎಥೆನಾಲ್ ಸೋರಿಕೆಯಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 52ರ ಸಂಚಾರ ಬಂದ್ ಮಾಡಿದ್ದು, ಅಂಕೋಲ ದಿಂದ ಮಾದನಗೇರಿ ಹೆದ್ದಾರಿ ಮೂಲಕ ಮಾರ್ಗ ಬದಲು ಮಾಡಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ NDR ತಂಡ ರವಾನೆ ಮಾಡಲಾಗಿದ್ದು, ಗ್ಯಾಸ್ ಸೋರಿಕೆಯನ್ನ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಘಟನೆ ಸಂಭಂಧ ಅಂಕೋಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…