Featured

ಕಾರವಾರ: ಪ್ರಥಮ ದರ್ಜೆಯ  ಗುತ್ತಿಗೆದಾರ ನೇಣಿಗೆ ಶರಣು – Vishwanews24

ಕಾರವಾರ: ಪ್ರಥಮ ದರ್ಜೆಯ  ಗುತ್ತಿಗೆದಾರ ನೇಣಿಗೆ ಶರಣು

ಕಾರವಾರ : ಅಂಕೋಲಾದ ಅಗಸೂರು ಗ್ರಾಮದ ಪ್ರಥಮ ದರ್ಜೆಯ ಗುತ್ತಿಗೆದಾರ ನೋರ್ವ ಮನೆಯ ಹಿಂಬದಿಯಲ್ಲಿರುವ ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಅಗಸೂರು ಗ್ರಾಮದಲ್ಲಿ ನಡೆದಿದೆ.

ಬಾಲಚಂದ್ರ ನಾಯಕ (55)ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರರಾಗಿದ್ದಾರೆ.ಮೂಲತಃ ಶೆಟಗೇರಿಯವರಾದ ಇವರು ಸದ್ಯ ಆಗಸೂರನಲ್ಲಿ ವಾಸವಾಗಿದ್ದರು. ಕ್ರೀಯಾಶೀಲ ವ್ಯಕ್ತಿತ್ವದ ಬಾಲಚಂದ್ರ ನಾಯಕ ಅವರು ಎಲ್ಲರೊಂದಿಗೂ ಚೆನ್ನಾಗಿದ್ದು ಆತ್ಮೀಯ ವ್ಯಕ್ತಿತ್ವಕ್ಕೆ ಹೆಸರಾಗಿದ್ದ. ಪ್ರಥಮ ದರ್ಜೆಯ ಗುತ್ತಿಗೆದಾರನಾಗಿ ತನ್ನ ವೃತ್ತಿಯನ್ನು ಕಂಡು ಕೊಂಡ ಬಾಲಚಂದ್ರ ನಾಯಕ ಕ್ಯಾಂಟೀನ ಬಾಬು ಎಂದೆ ಹೆಸರಾಗಿದ್ದರು.

ಅಗಸೂರು ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ, ಅಗಸೂರಿನ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷನಾಗಿ ಪ್ರಸ್ತುತವಾಗಿ ಸೇವೆ ಸಲ್ಲಿಸುತ್ತ ಜನಪ್ರೀಯನಾಗಿದ್ದ. ಅಗಸೂರು ಅಧ್ಯಕ್ಷನಾಗಿಯೂ ಗ್ರಾ.ಪಂ ಸಮರ್ಥವಾಗಿ ಕಾರ್ಯನಿರ್ವಹಿಸಿ ಮಾದರಿ ಆಡಳಿತ ನೀಡಿದ ಕಿರ್ತೀಯು ಬಾಲಚಂದ್ರ ನಾಯಕ ಅವರಿಗಿದೆ.

ಜಿಎಸ್ ಟಿ ಹೊರೆ :

ಬಾಲಚಂದ್ರ ನಾಯಕ ಆತ್ಮಹತ್ಯೆಗೆ ಜಿ.ಎಸ್.ಟಿ ಕಿರುಕುಳ ಕಾರಣವಾಯಿತೇ ಎಂಬ ಮಾತು ಕೇಳಿ ಬಂದಿದೆ. ಸರ್ಕಾರಿ ಕಾಮಗಾರಿಗಳನ್ನ ಮಾಡಿದ್ದ ಗುತ್ತಿಗೆದಾರ ಬಾಲಚಂದ್ರ ಅವರಿಗೆ ಬಿಲ್ ಸಹ ಆಗಿರಲಿಲ್ಲ. ಬಿಲ್ ಮಂಜೂರಾತಿಗೆ ಸಾಕಷ್ಟು ಓಡಾಟ ಮಾಡಿದ್ದರು ಎನ್ನಲಾಗಿದೆ.

ಇದರ ನಡುವೆ ಜಿ.ಎಸ್.ಟಿ ತುಂಬಲೇ ಬೇಕು ಎಂದು ಒತ್ತಡ ಬರುತ್ತಿದೆ. ನನಗೆ ದೊಡ್ಡ ಸಮಸ್ಯೆ ಆಗಿದೆ ಎಂದು ಬಾಲಚಂದ್ರ ನಾಯಕ ಹಲವರ ಮುಂದೆ ಪ್ರಸ್ತಾಪಿಸಿದ್ದರು. ಜಿ.ಎಸ್.ಟಿ ತುಂಬದಿದ್ದರೆ ದಂಡ ಹೆಚ್ಚಾಗಲಿದೆ ಎನ್ನುವ ಆತಂಕ ಬಾಲಚಂದ್ರ ಅವರಿಗಿತ್ತು ಎನ್ನಲಾಗಿದೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

16 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

17 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

17 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

17 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

21 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

22 hours ago