ಕಾರವಾರ: ಪುಣೆಯಲ್ಲಿ ನಡೆದ ಉಗ್ರ ಕೃತ್ಯದ ಆರೋಪಿಗಾಗಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ವು ಭಟ್ಕಳದಲ್ಲಿ ಶೋಧ ನಡೆಸಿದೆ.
ಭಟ್ಕಳದ ನವಾಯತ್ ಕಾಲೋನಿಯ ಹಾಜಿ ಮಂಜಿಲ್ ನಿವಾಸಿ ಅಬ್ದುಲ್ ಕಬೀರ್ ಸುಲ್ತಾನ್ ಅಲಿಯಾಸ್ ಮೌಲಾನ ಸುಲ್ತಾನ್ ಎಂಬಾತನಿಗಾಗಿ ಎಟಿಎಸ್ ಹುಡುಕಾಟ ನಡೆಸಲಾಗಿದೆ. ಈತ ಪುಣೆಯಲ್ಲಿ ನಡೆದ ಉಗ್ರ ಕೃತ್ಯದ ಆರೋಪಿಯಾಗಿದ್ದು, ಕಳೆದೊಂದು ವರ್ಷದಿಂದ ತಲೆಮರೆಸಿಕೊಂಡಿದ್ದಾನೆ.
ಶಂಕಿತ ಉಗ್ರ ಕಬೀರ್ ಸುಲ್ತಾನ್ ನನ್ನು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ಮಹಾರಾಷ್ಟ್ರ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆ ಎಟಿಎಸ್ ತಂಡ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದೆ. ಭಟ್ಕಳದಲ್ಲಿನ ಶಂಕಿತ ಉಗ್ರ ಕಬೀರ್ ಸುಲ್ತಾನ್ ನಿವಾಸಕ್ಕೆ ಎಟಿಎಸ್ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಎಟಿಎಸ್ ಅಧಿಕಾರಿಗಳು ಆರೋಪಿಯ ಬಂಧನಕ್ಕೆ ಉತ್ತರ ಕನ್ನಡ ಪೊಲೀಸರ ಸಹಕಾರ ಕೋರಿದ್ದಾರೆ.
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…