ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ತೆರಳಿದ್ದ ಬೋಟ್ ಭಾರಿ ಗಾಳಿ ಮಳೆಯಿಂದಾಗಿ ಮುಳುಗಡೆಯಾಗಿದ್ದು, ಬೋಟ್ನಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹಾದೇವ ಖಾರ್ವಿ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಡೆಯಾಗಿದೆ.ಇಂದು ಬೆಳಿಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬೀ ಸಮದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ. ಸ್ಥಳದಲ್ಲಿದ್ದ ಇನ್ನೊಂದು ಬೋಟ್ನವರಿಂದ ಮೀನುಗಾರರ ರಕ್ಷಣೆ ಮಾಡಲಾಗಿದೆ. ಬೋಟ್ ದುರ್ಘಟನೆಯಿಂದ ಮಾಲೀಕರಿಗೆ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.
ಇನ್ನೊಂದೆಡೆ ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಏ.೨೦ ಮತ್ತು ಏ.೨೧ ರಂದು ಹವಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.
ಉಡುಪಿ: ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…