Featured

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ – ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ

ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ ರೈಲನ್ನು ಇನ್ನು ಮುಂದೆ ಖಾಯಂ ಸೇವೆಯನ್ನಾಗಿ ಪರಿವರ್ತಿಸಲು ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಕಾರವಾರ ಭಾಗದ ಸಾರ್ವಜನಿಕರು ಹಾಗೂ ರೈಲ್ವೆ ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಈ ರೈಲು ಸೇವೆಯನ್ನು ಖಾಯಂಗೊಳಿಸುವಂತೆ ರೈಲ್ವೆ ಸಚಿವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿ ಒತ್ತಾಯಿಸಲಾಗಿತ್ತು. ಈ ಪ್ರಯತ್ನಕ್ಕೆ ರೈಲ್ವೆ ಇಲಾಖೆಯಿಂದ ಹಸಿರು ನಿಶಾನೆ ಸಿಕ್ಕಿದೆ.

ಹೊಸ ರೈಲು ಸಂಖ್ಯೆ ಮತ್ತು ವೇಳಾಪಟ್ಟಿ ಮಾಹಿತಿ:
ಈ ಹಿಂದೆ ವಿಶೇಷ ರೈಲು ಸಂಖ್ಯೆ 01595/01596 ಆಗಿ ಸಂಚರಿಸುತ್ತಿದ್ದ ಈ ಸೇವೆಯನ್ನು, ಇನ್ನು ಮುಂದೆ ಹೊಸದಾಗಿ ರೈಲು ಸಂಖ್ಯೆ 10109/10110 ಮಡಗಾಂವ್ – ಕಾರವಾರ – ಮಡಗಾಂವ್ ಎಕ್ಸ್‌ಪ್ರೆಸ್ ಹೆಸರಿನಲ್ಲಿ ಪ್ರತಿದಿನ ನಿಯಮಿತವಾಗಿ ಓಡಿಸಲಾಗುತ್ತದೆ.

ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

ಹಚ್ಚೆ ವಿನ್ಯಾಸವನ್ನು ಆರಿಸಲು ಮುಂದಾಗಬೇಡಿ, ಬೇಡ, ಕಲಾವಿದನು ಶಾಯಿಯ ಕೊನೆಯ ಹನಿ ಸೇರಿಸಿದ ಕೂಡಲೇ ನಿಮ್ಮ ನಿರ್ಧಾರಕ್ಕೆ ನೀವು ವಿಷಾದಿಸಬಹುದು, ಹಚ್ಚಿ ಪಡೆಯುವ ಮೊದಲು ನೀವು ಸಾಕಷ್ಟು ಸಂಶೋಧನೆ ಮಾಡಬೇಕು.

ರೈಲು ಸಂಖ್ಯೆ 10110 (ಕಾರವಾರ – ಮಡಗಾಂವ್ ಎಕ್ಸ್‌ಪ್ರೆಸ್): ಪ್ರತಿದಿನ ಬೆಳಿಗ್ಗೆ 08:30 ಕ್ಕೆ ಕಾರವಾರದಿಂದ ಹೊರಟು, ಅದೇ ದಿನ ಬೆಳಿಗ್ಗೆ 09:45 ಕ್ಕೆ
ಮಡಗಾಂವ್ ತಲುಪಲಿದೆ.

ರೈಲು ಸಂಖ್ಯೆ 10109 (ಮಡಗಾಂವ್ – ಕಾರವಾರ ಎಕ್ಸ್‌ಪ್ರೆಸ್): ಪ್ರತಿದಿನ ಸಂಜೆ 04:30 ಕ್ಕೆ ಮಡಗಾಂವ್‌ನಿಂದ ಹೊರಟು, ಸಂಜೆ 05:45 ಕ್ಕೆ ಕಾರವಾರವನ್ನು ತಲುಪಲಿದೆ.

ಕಾಣಕೋಣ ನಿಲ್ದಾಣದಲ್ಲಿ ವಾಣಿಜ್ಯ ನಿಲುಗಡೆ: ಉಭಯ ರಾಜ್ಯಗಳ ಗಡಿ ಭಾಗದ ಪ್ರಯಾಣಿಕರ ಹಿತದೃಷ್ಟಿಯಿಂದ ಈ ರೈಲಿಗೆ ಗೋವಾದ ಪ್ರಮುಖ ಪ್ರವಾಸಿ ತಾಣವಾದ ಕಾಣಕೋಣ (Canacona) ನಿಲ್ದಾಣದಲ್ಲಿ ವಾಣಿಜ್ಯ ನಿಲುಗಡೆಯನ್ನು ಕಲ್ಪಿಸಲಾಗಿದೆ.

ಒಟ್ಟು 14 ಬೋಗಿಗಳು: ಯಾರಿಗೆಲ್ಲ ಅನುಕೂಲ?
ಈ ಎಕ್ಸ್‌ಪ್ರೆಸ್ ರೈಲು ಎಸಿ (AC), ಸ್ಲಿಪರ್ (Sleeper) ಮತ್ತು ಸಾಮಾನ್ಯ ದರ್ಜೆಯ (General) ಬೋಗಿಗಳನ್ನು ಒಳಗೊಂಡ ಒಟ್ಟು 14 ಬೋಗಿಗಳೊಂದಿಗೆ ಸಂಚರಿಸಲಿದೆ. ಈ ಭಾಗದ ಜನಸಾಮಾನ್ಯರಿಗೆ, ಉದ್ಯೋಗಿಗಳಿಗೆ, ಪ್ರವಾಸಿಗರಿಗೆ ಹಾಗೂ ಆರೋಗ್ಯ ಸೇವೆಗಾಗಿ ಗೋವಾಕ್ಕೆ ತೆರಳುವ ರೋಗಿಗಳಿಗೆ ಅತ್ಯಂತ ಉಪಯುಕ್ತವಾಗಲಿರುವ ಈ ಖಾಯಂ ರೈಲು ಸೇವೆಯ ಸೌಲಭ್ಯವನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಜೂನ್ 11 ಕ್ಕೆ ವಿ. ಸೋಮಣ್ಣ ಅವರಿಂದ ಚಾಲನೆ
ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಜೂನ್ 11ರಂದು ಗೋವಾದ ಮಡಗಾಂವ್ ನಿಲ್ದಾಣದಿಂದ ಈ ರೈಲಿನ ನಿಯಮಿತ (ಖಾಯಂ) ಸೇವೆಗೆ ಅಧಿಕೃತವಾಗಿ ಹಸಿರು ನಿಶಾನೆ ತೋರಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಈ ಪ್ರಮುಖ ರೈಲ್ವೆ ಬೇಡಿಕೆಯನ್ನು ಈಡೇರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ಪ್ರಕಟಣೆಯಲ್ಲಿ ವಿಶೇಷ ಧನ್ಯವಾದ ಹಾಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago