ಕಾರವಾರ: ಮೀನು ತುಂಬಿದ ವಾಹನ ಹರಿದು ಕಾರ್ಮಿಕ ಸಾವು – vishwanews24

Featured, ರಾಜ್ಯ ನ್ಯೂಸ್

ಕಾರವಾರ: ಮೀನು ತುಂಬಿದ ವಾಹನ ಹರಿದು ಕಾರ್ಮಿಕ ಸಾವು

ಕಾರವಾರ: ಮೀನು ತುಂಬಿಕೊಂಡಿದ್ದ ಬುಲೆರೋ ವಾಹನ ಕಾರ್ಮಿಕನ ಮೇಲೆ ಹಾದು ಹೋಗಿ ಸ್ಥಳದಲ್ಲೇ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ  ಜಿಲ್ಲೆಯ ಕಾರವಾರದ ಬೈತಕೋಲ್‌ನಲ್ಲಿ  ನಡೆದಿದೆ.

ಮೃತ ಕಾರ್ಮಿಕನನ್ನು ಹಾವೇರಿ  ಮೂಲದ ಹನುಮಂತ್ ವಡ್ಡರ್ (27) ಎಂದು ಗುರುತಿಸಲಾಗಿದ್ದು, ಮುಂದಿನ ತಿಂಗಳು ಕಾರ್ಮಿಕನ ಮದುವೆ ಕೂಡ ನಿಶ್ಚಯವಾಗಿತ್ತು. ಕಾರವಾರದ ಬೈತಕೋಲ್‌ನಲ್ಲಿ ಮೀನುಗಾರಿಕಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಬುಧವಾರ ಕೊಪ್ಪಳದ ಐದು ಜನ ಸ್ನೇಹಿತರೊಂದಿಗೆ ಕೆಲಸ ಮುಗಿಸಿ ಬಂದರಿನಲ್ಲಿ ಮಲಗಿದ್ದ.

 ಉಡುಪಿ ಉಚ್ಚಿಲ ದಸರಾ: ಪ್ರತಿದಿನ ಗಣ್ಯರಿಂದ ಧಾರ್ಮಿಕ ಉಪನ್ಯಾಸ ಮತ್ತು ಪ್ರವಚನ – vishwanews24

ಗುರುವಾರ ಮುಂಜಾನೆ ಮೀನು ತುಂಬಿಕೊಂಡಿದ್ದ ಬುಲೆರೋ ವಾಹನ ಹೊರಡುವ ಸಮಯದಲ್ಲಿ ಚಾಲಕ ಈ ಕಾರ್ಮಿಕನನ್ನು ಮಲಗಿರುವುದನ್ನು ನೋಡದೇ ವಾಹನ ಚಲಾಯಿಸಿದ್ದು, ಈತನ ತಲೆಯ ಮೇಲೆ ಹರಿದು ಸ್ಥಳದಲ್ಲೇ ಮೃತಟ್ಟಿದ್ದಾನೆ.

ಸದ್ಯ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಬಂಟ್ವಾಳ:  ರಸ್ತೆ ಅಪಘಾತ – ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು – vishwanews24

Leave a Reply