Featured

ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಿಷೇಧ : ಸರಕಾರ ಅದೇಶ – Vishwanews24

ಹಿಂದೂ ಜಾಗರಣಾ ವೇದಿಕೆಯ ಹೋರಾಟಕ್ಕೆ ಜಯ

ಕಾರಿಂಜೇಶ್ವರ ಸನ್ನಿಧಿಯಲ್ಲಿ ಅಕ್ರಮ ಗಣಿಗಾರಿಕೆ ನಿಷೇಧ – ಸರಕಾರ ಅದೇಶ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ನಿಷೇಧ ಮಾಡಿ ಸರಕಾರ ಅದೇಶ ಹೊರಡಿಸಿದೆ.

ಈ ಮೂಲಕ ಹಿಂದೂ ಜಾಗರಣಾ ವೇದಿಕೆಯ ಹೋರಾಟಕ್ಕೆ ಜಯ ಸಿಕ್ಕಿದೆ.

ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂಬುದು ಅರೋಪವಾಗಿದ್ದು, ಇದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆದಿತ್ತು.

 

ಅದರೆ ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧದ ಅದೇಶ ಮಾಡಿದೆ.

ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು, 1994ರ ನಿಯಮ 8(3) ರಲ್ಲಿ ಪ್ರದವಾಗಿರುವ ಅಧಿಕಾರವನ್ನು ಚಲಾಯಿಸಿ ಸರ್ಕಾರವು ದಕ್ಷಿಣ ಕನ್ನಡ ಜಿಲೆ, ಬಂಟ್ವಾಳ ತಾಲೂಕು, ಕಾವಳಮುರು ಗ್ರಾಮದ ವ್ಯಾಪ್ತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ 02 ಕಿಲೋ ಮೀಟರ್ ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯಿರಿಸಿ, ಸದರಿ ಸ್ಥಳದ 02 ಕಿಲೋ ಮೀಟರ್ ಸುತ್ತಳತೆ ವ್ಯಾಪ್ತಿಯಲ್ಲಿ, ಎಲ್ಲಾ ರೀತಿಯ ಗಣಿಗಾರಿಕ ಮತ್ತು ಕಲ್ಲುಪುಡಿ (ಕುವ‌ ಚಟುವಟಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ನಿಷೇಧಿಸಿದೆ. ಎಂಬ ಅದೇಶ ಹೊರಡಿಸಿದೆ.

ಅಕ್ರಮ ಗಣಿಗಾರಿಕೆಯ ವಿರುದ್ದ ಹಿಂದೂ ಜಾಗರಣ ವೇದಿಕೆ ವತಿಯಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿತ್ತು.

ಗಣಿಗಾರಿಕೆ ಯನ್ನು ನಿಲ್ಲಿಸಲು ಪ್ರತಿಭಟನೆ , ಸಹಿತ ಅನೇಕಹೋರಾಟಗಳು ನಡೆದ ಪರಿಣಾಮ ಹಾಗೂ ಇವರ ಹೋರಾಟದ ಜೊತೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ನೀಡಿದ ಬೆಂಬಲದಿಂದ ಗಣಿಗಾರಿಕೆ ಬಂದ್ ಆಗಿದೆ.

ಈ ಬಗ್ಗೆ ಹಿಂದೂ ಜಾಗರಣಾ ವೇದಿಕೆಯವರ ಹೋರಾಟದ ಬಗ್ಗೆ ಶಾಸಕರು ಮುಖ್ಯಮಂತ್ರಿ ಅವರಿಗೆ ಗಣಿಗಾರಿಕೆಯನ್ನು ನಿಲ್ಲಿಸುವ ಅದೇಶ ಮಾಡುವಂತೆ ಮನವಿ ಮಾಡಿದ್ದರು.

ಇದೀಗ ಸರಕಾರದ ಅದೇಶ ಹೊರಡಿಸಿದ್ದು, ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago