ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ನಿಷೇಧ ಮಾಡಿ ಸರಕಾರ ಅದೇಶ ಹೊರಡಿಸಿದೆ.
ಈ ಮೂಲಕ ಹಿಂದೂ ಜಾಗರಣಾ ವೇದಿಕೆಯ ಹೋರಾಟಕ್ಕೆ ಜಯ ಸಿಕ್ಕಿದೆ.
ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂಬುದು ಅರೋಪವಾಗಿದ್ದು, ಇದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆದಿತ್ತು.
ಅದರೆ ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧದ ಅದೇಶ ಮಾಡಿದೆ.
ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು, 1994ರ ನಿಯಮ 8(3) ರಲ್ಲಿ ಪ್ರದವಾಗಿರುವ ಅಧಿಕಾರವನ್ನು ಚಲಾಯಿಸಿ ಸರ್ಕಾರವು ದಕ್ಷಿಣ ಕನ್ನಡ ಜಿಲೆ, ಬಂಟ್ವಾಳ ತಾಲೂಕು, ಕಾವಳಮುರು ಗ್ರಾಮದ ವ್ಯಾಪ್ತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ 02 ಕಿಲೋ ಮೀಟರ್ ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯಿರಿಸಿ, ಸದರಿ ಸ್ಥಳದ 02 ಕಿಲೋ ಮೀಟರ್ ಸುತ್ತಳತೆ ವ್ಯಾಪ್ತಿಯಲ್ಲಿ, ಎಲ್ಲಾ ರೀತಿಯ ಗಣಿಗಾರಿಕ ಮತ್ತು ಕಲ್ಲುಪುಡಿ (ಕುವ ಚಟುವಟಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ನಿಷೇಧಿಸಿದೆ. ಎಂಬ ಅದೇಶ ಹೊರಡಿಸಿದೆ.
ಅಕ್ರಮ ಗಣಿಗಾರಿಕೆಯ ವಿರುದ್ದ ಹಿಂದೂ ಜಾಗರಣ ವೇದಿಕೆ ವತಿಯಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿತ್ತು.
ಗಣಿಗಾರಿಕೆ ಯನ್ನು ನಿಲ್ಲಿಸಲು ಪ್ರತಿಭಟನೆ , ಸಹಿತ ಅನೇಕಹೋರಾಟಗಳು ನಡೆದ ಪರಿಣಾಮ ಹಾಗೂ ಇವರ ಹೋರಾಟದ ಜೊತೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ನೀಡಿದ ಬೆಂಬಲದಿಂದ ಗಣಿಗಾರಿಕೆ ಬಂದ್ ಆಗಿದೆ.
ಈ ಬಗ್ಗೆ ಹಿಂದೂ ಜಾಗರಣಾ ವೇದಿಕೆಯವರ ಹೋರಾಟದ ಬಗ್ಗೆ ಶಾಸಕರು ಮುಖ್ಯಮಂತ್ರಿ ಅವರಿಗೆ ಗಣಿಗಾರಿಕೆಯನ್ನು ನಿಲ್ಲಿಸುವ ಅದೇಶ ಮಾಡುವಂತೆ ಮನವಿ ಮಾಡಿದ್ದರು.
ಇದೀಗ ಸರಕಾರದ ಅದೇಶ ಹೊರಡಿಸಿದ್ದು, ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…