ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಜೂ.7ರ ಶನಿವಾರ ಬೆಳಗ್ಗೆ ಸಂಭವಿಸಿದೆ.
ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚೇತನ್ (19) ಮೃತಪಟ್ಟವರು.
ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ. ಅದೇ ರೀತಿ ಇಂದು (ಜೂ.7ರ ಶನಿವಾರ) ಸ್ನೇಹಿತ ಪ್ರಶ್ವಿತ್ ಜೊತೆಗೆ ದೇವಸ್ಥಾನಕ್ಕೆ ತೆರಳಿದ್ದ. ಈ ವೇಳೆ ದೇವಾಲಯದ ಕೆರೆಯಲ್ಲಿ ಕಾಲು ತೊಳೆಯಲು ಮೆಟ್ಟಿಲು ಇಳಿಯುತ್ತಿದ್ದಂತೆ ಚೇತನ್ ಕಾಲು ಜಾರಿ ಕೆರೆಯೊಳಗೆ ಬಿದ್ದಿದ್ದಾನೆ.
ಜೊತೆಯಲ್ಲಿದ್ದ ಗೆಳೆಯ ಪ್ರಶ್ವಿತ್ ಗೆ ಈಜು ಬರದ ಕಾರಣ ಆತ ಬೊಬ್ಬೆ ಹೊಡೆದು ಸ್ಥಳೀಯರನ್ನು ಕರೆದಿದ್ದಾನೆ. ಕೂಡಲೇ ಸ್ಥಳೀಯರು ಸೇರಿದ್ದು, ಶ್ರವಣ್ ಜೈನ್ ಹಾಗೂ ಉದಯ ಮಾಂಗಾಜೆ ಅವರು ಕೆರೆಗೆ ಹಾರಿ ಹುಡುಕಲು ಆರಂಭಿಸಿ, ಚೇತನ್ ನನ್ನು ಕೆರೆಯಿಂದ ಮೇಲಕ್ಕೆತ್ತಿ ಹಾಕಿದ್ದಾರೆ. ಆದರೆ ಅದಾಗಲೇ ಚೇತನ್ ಮೃತಪಟ್ಟಿದ್ದರು.
ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…