Featured

ಕಾರಿಗೆ  ಬೈಕ್ ತಾಗಿದ್ದಕ್ಕೆ ಅಪಘಾತವೆಸಗಿ ಯುವಕನ ಹತ್ಯೆ : ದುಷ್ಕರ್ಮಿಗಳು ಅರೆಸ್ಟ್ – vishwanews24

ಕಾರಿಗೆ  ಬೈಕ್ ತಾಗಿದ್ದಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ದುಷ್ಕರ್ಮಿಗಳು ಅರೆಸ್ಟ್

ಬೆಂಗಳೂರು: ಕಾರಿಗೆ  ಬೈಕ್ ತಾಗಿದ್ದಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ.

ಮಹೇಶ್ (21) ಹತ್ಯೆಯಾದ ಯುವಕ. ಕೊಲೆಯಾದ ಮಹೇಶ್ ಡೆಲಿವರಿ ಬಾಯ್  ಆಗಿ ಕೆಲಸ ಮಾಡಿಕೊಂಡಿದ್ದ. ಬುಧವಾರ ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಜಿಕೆವಿಕೆ ಬಳಿ ಬೈಕ್‍ನಲ್ಲಿ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ಆತನ ಬೈಕ್ ಕಾರೊಂದಕ್ಕೆ ತಾಗಿದೆ. ಈ ವೇಳೆ ಕಾರಿನಲ್ಲಿದ್ದ ಅರವಿಂದ್ ಹಾಗೂ ಕೇಶವ್ ಎಂಬವರು ಗಲಾಟೆ ಮಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ಹತ್ಯೆಗೆ ಕಾರಣವಾಗಿದೆ.

ಗಲಾಟೆ ಬಳಿಕ ಮಹೆಶ್ ಬೈಕ್‍ನಲ್ಲಿ ಹೋಗುವಾಗ ಕಾರಿನಲ್ಲಿ ಕಿಲೋಮೀಟರ್‌ಗಟ್ಟಲೆ ಚೇಸ್ ಮಾಡಿ ಆರೋಪಿಗಳು ಬೈಕ್‍ಗೆ ಹಿಂದಿನಿಂದ ಅಪಘಾತವೆಸಗಿದ್ದಾರೆ. ಪರಿಣಾಮ ಬೈಕ್‍ನಲ್ಲಿದ್ದ ಮಹೇಶ್ ತಲೆ ರಸ್ತೆಯಲ್ಲಿದ್ದ ಪೋಲ್ ಹಾಗೂ ಗೋಡೆಗೆ ಬಡಿದಿದೆ. ಹೆಲ್ಮೆಟ್ ಹಾಕಿರದ ಕಾರಣ ಮೆದಳು ಹೊರಗಡೆ ಬಂದಿದ್ದು, ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ.

ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು, ಅರವಿಂದ್ ಹಾಗೂ ಕೇಶವ್‍ನನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago