ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆ ಕಾಣುತ್ತಿದೆ. ಏತನ್ಮಧ್ಯೆ ”ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗಲೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು” ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಒಬ್ಬರೇ ವಾಹನ ಚಲಾಯಿಸುವಾಗ ಮಾಸ್ಕ್ ಧರಿಸಿಲ್ಲವೆಂದು ದಂಡ ಹಾಕಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ಪ್ರತಿಭಾ ಎಂ ಸಿಂಗ್ ಅವರು, ಈ ತೀರ್ಪನ್ನು ಪ್ರಕಟಿಸಿದರು.
”ಒಬ್ಬ ವ್ಯಕ್ತಿಯು ಕಾರಿನಲ್ಲಿ ಏಕಾಂಗಿಯಾಗಿ ವಾಹನ ಚಲಾಯಿಸುತ್ತಿದ್ದರೂ ಮಾಸ್ಕ್ ಕಡ್ಡಾಯ” ಎಂದು ಹೇಳಿರುವ ದೆಹಲಿ ಹೈಕೋರ್ಟ್, ಯಾವುದೇ ವಾಹನವೂ ಕೊರೊನಾ ನಿಯಮಕ್ಕೆ ಒಳಪಡುವ “ಸಾರ್ವಜನಿಕ ಸ್ಥಳ” ಎಂದು ಸಂಬೋಧಿಸಿದೆ. ಹಾಗೆಯೇ ಮಾಸ್ಕ್ ಧರಿಸುವುದು ಆ ವ್ಯಕ್ತಿಗೆ ಹಾಗೂ ಸುತ್ತಮುತ್ತಲಿನವರಿಗೆ “ಸುರಕ್ಷಾ ಕವಚ” ಎಂದು ನ್ಯಾಯಾಲಯ ಹೇಳಿದೆ.
ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದ ಮುಕೇಶ್ ಅಂಬಾನಿ -Vishwanews24
“ನೀವು ಕಾರಿನಲ್ಲಿ ಏಕಾಂಗಿಯಾಗಿದ್ದರೂ, ಮಾಸ್ಕ್ ಧರಿಸಲು ಏಕೆ ಆಕ್ಷೇಪಿಸುತ್ತೀರಿ? ಇದು ನಿಮ್ಮ ಸ್ವಂತ ಸುರಕ್ಷತೆಗಾಗಿ. ಸಾಂಕ್ರಾಮಿಕ ಬಿಕ್ಕಟ್ಟು ಹೆಚ್ಚಾಗಿದೆ. ಒಬ್ಬ ವ್ಯಕ್ತಿಗೆ ಲಸಿಕೆ ನೀಡಲಾಗಿದೆಯೋ ಇಲ್ಲವೋ ಎಂಬುದು ಮುಖ್ಯವಲ್ಲ ಎಲ್ಲರೂ ಮಾಸ್ಕ್ ಧರಿಸಬೇಕು” ಎಂದು ಕೋರ್ಟ್ ಹೇಳಿದೆ.
“ಟ್ರಾಫಿಕ್ ಸಿಗ್ನಲ್ನಲ್ಲಿ ಕಾರು ನಿಂತಾಗ, ಚಾಲಕರು ಆಗಾಗ್ಗೆ ಕಿಟಕಿಯಿಂದ ಹೊರ ತಲೆಹಾಕಿ ನೋಡುತ್ತಾರೆ. ಕೊರೊನಾ ಎಷ್ಟು ಸಾಂಕ್ರಾಮಿಕವಾಗಿದೆ ಎಂದರೆ ಆ ಸಮಯದಲ್ಲಿಯೂ ಯಾರಾದರೂ ಸೋಂಕಿಗೆ ಒಳಗಾಗಬಹುದು” ಎಂದು ಕೋರ್ಟ್ ಅಭಿಪ್ರಾಯಿಸಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಂಕು ತೀವ್ರಗತಿಲ್ಲಿ ಹರಡುತ್ತಿದೆ. ದೆಹಲಿಯಲ್ಲಿ ಒಂದೇ ದಿನ 5,100 ಕೊರೊನಾ ಪ್ರಕರಣಗಳು ದೃಢವಾದ ಒಂದು ದಿನದ ನಂತರ ನ್ಯಾಯಾಲಯ ಈ ಆದೇಶ ನೀಡಿದೆ. ಭಾರತದಲ್ಲಿ ಪ್ರಸ್ತುತ 1 ಕೋಟಿ 28 ಲಕ್ಷಕ್ಕೂ ಅಧಿಕ ಮಂದಿ ಸೋಂಕಿಗೆ ಒಳಗಾಗಿದ್ದಾರೆ. 1,66,177 ಮಂದಿ ಸಾವನ್ನಪ್ಪಿದ್ದಾರೆ.
ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಬಿಗ್ ಶಾಕ್ ವೇತನ ತಡೆಗೆ ಮುಂದಾದ ಸರ್ಕಾರ ! Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…