ಉಡುಪಿ: ಮಣಿಪಾಲ ಶಿವಳ್ಳಿ ಗ್ರಾಮ ವಿದ್ಯಾರತ್ನ ರಸ್ತೆಯಲ್ಲಿ ಕಾರಿನಲ್ಲಿ ಕುಳಿತು ಚಾಕುವಿನಿಂದ ಕೈ, ಹೊಟ್ಟೆಗೆ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಉದ್ಯಮಿ, ಲಕ್ಷ್ಮೀಂದ್ರನಗರದ ನಿವಾಸಿ ಓಲಿವರ್ ವಿ.ಲೂವಿಸ್(68) ಅವರ ಮೃತದೇಹ ಪತ್ತೆಯಾಗಿದೆ.
ವಿದ್ಯಾರತ್ನ ನಗರದ ಲೂವಿಸ್ ಸಂಬಂಧಿಕರ ಮನೆ ಸಮೀಪವೇ ಭಾನುವಾರ ತಡರಾತ್ರಿ ಘಟನೆ ನಡೆದಿದೆ. ಲೂವಿಸ್ ಅವರು ಲಕ್ಷ್ಮೀಂದ್ರ ನಗರ, ಮಣಿಪಾಲ, ಸಂತೆಕಟ್ಟೆಯಲ್ಲಿ ಮನೆಯನ್ನು ಹೊಂದಿದ್ದಾರೆ. 12 ವರ್ಷ ಖಾಸಗಿ ಶಿಪ್ನ ಕ್ಯಾಪ್ಟನ್ ಆಗಿ ಕೆಲಸ ಮಾಡಿದ್ದ ಅವರು ನಿವೃತ್ತಿ ಬಳಿಕ ಬಿಲ್ಡರ್ ಆಗಿ ಕಾರ್ಯನಿರ್ವಹಿಸುತಿದ್ದರು ಎನ್ನಲಾಗಿದೆ. ಪೊಲೀಸರು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಕಾರಿನ ಬಲಭಾಗದ ಸೀಟ್ನಲ್ಲಿ ಮೃತದೇಹ ಸಂಪೂರ್ಣ ಮರಗಟ್ಟಿದ ಸ್ಥಿತಿಯಲ್ಲಿತ್ತು, ಲೂವೀಸ್ ಬಲಗೈನಲ್ಲಿ ಚಾಕು ಹಿಡಿದುಕೊಂಡಿದ್ದರು. ಯಾರೂ ನೋಡಬಾರದು ಎಂದು ಕಾರಿನ ಗ್ಲಾಸ್ ಮುಂಭಾಗ ಬಿಸಿಲಿಗೆ ಮುಚ್ಚುವ ಕವರ್ ಮುಚ್ಚಿದ್ದರು. ಕಾರನ್ನು ಲಾಕ್ ಮಾಡಿದ್ದರು. ಹೆಚ್ಚಿನ ಪ್ರಮಾಣದಲ್ಲಿ ಹೊಟ್ಟೆ ಕೊಯ್ದಿರುವುದರಿಂದ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿರುವ ಸಾಧ್ಯತೆ ಇದೆ. ಮಣಿಪಾಲ ವೈದ್ಯರು ಹಾಗೂ ಫಾರೆನ್ಸಿಕ್ ತಜ್ಞರು ಸ್ಥಳಕ್ಕಾಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಮಣಿಪಾಲದ ಕೆಎಂಸಿಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸ್ಥಳದಲ್ಲಿ ದೊರೆತ ಚಾಕು ಮತ್ತು ಮರಣಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…