ಉಡುಪಿ: ಮಣಿಪಾಲ ಶಿವಳ್ಳಿ ಗ್ರಾಮ ವಿದ್ಯಾರತ್ನ ರಸ್ತೆಯಲ್ಲಿ ಕಾರಿನಲ್ಲಿ ಕುಳಿತು ಚಾಕುವಿನಿಂದ ಕೈ, ಹೊಟ್ಟೆಗೆ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಉದ್ಯಮಿ, ಲಕ್ಷ್ಮೀಂದ್ರನಗರದ ನಿವಾಸಿ ಓಲಿವರ್ ವಿ.ಲೂವಿಸ್(68) ಅವರ ಮೃತದೇಹ ಪತ್ತೆಯಾಗಿದೆ.
ವಿದ್ಯಾರತ್ನ ನಗರದ ಲೂವಿಸ್ ಸಂಬಂಧಿಕರ ಮನೆ ಸಮೀಪವೇ ಭಾನುವಾರ ತಡರಾತ್ರಿ ಘಟನೆ ನಡೆದಿದೆ. ಲೂವಿಸ್ ಅವರು ಲಕ್ಷ್ಮೀಂದ್ರ ನಗರ, ಮಣಿಪಾಲ, ಸಂತೆಕಟ್ಟೆಯಲ್ಲಿ ಮನೆಯನ್ನು ಹೊಂದಿದ್ದಾರೆ. 12 ವರ್ಷ ಖಾಸಗಿ ಶಿಪ್ನ ಕ್ಯಾಪ್ಟನ್ ಆಗಿ ಕೆಲಸ ಮಾಡಿದ್ದ ಅವರು ನಿವೃತ್ತಿ ಬಳಿಕ ಬಿಲ್ಡರ್ ಆಗಿ ಕಾರ್ಯನಿರ್ವಹಿಸುತಿದ್ದರು ಎನ್ನಲಾಗಿದೆ. ಪೊಲೀಸರು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಕಾರಿನ ಬಲಭಾಗದ ಸೀಟ್ನಲ್ಲಿ ಮೃತದೇಹ ಸಂಪೂರ್ಣ ಮರಗಟ್ಟಿದ ಸ್ಥಿತಿಯಲ್ಲಿತ್ತು, ಲೂವೀಸ್ ಬಲಗೈನಲ್ಲಿ ಚಾಕು ಹಿಡಿದುಕೊಂಡಿದ್ದರು. ಯಾರೂ ನೋಡಬಾರದು ಎಂದು ಕಾರಿನ ಗ್ಲಾಸ್ ಮುಂಭಾಗ ಬಿಸಿಲಿಗೆ ಮುಚ್ಚುವ ಕವರ್ ಮುಚ್ಚಿದ್ದರು. ಕಾರನ್ನು ಲಾಕ್ ಮಾಡಿದ್ದರು. ಹೆಚ್ಚಿನ ಪ್ರಮಾಣದಲ್ಲಿ ಹೊಟ್ಟೆ ಕೊಯ್ದಿರುವುದರಿಂದ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿರುವ ಸಾಧ್ಯತೆ ಇದೆ. ಮಣಿಪಾಲ ವೈದ್ಯರು ಹಾಗೂ ಫಾರೆನ್ಸಿಕ್ ತಜ್ಞರು ಸ್ಥಳಕ್ಕಾಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಮಣಿಪಾಲದ ಕೆಎಂಸಿಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸ್ಥಳದಲ್ಲಿ ದೊರೆತ ಚಾಕು ಮತ್ತು ಮರಣಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…