ಉಡುಪಿ: ಮಣಿಪಾಲ ಶಿವಳ್ಳಿ ಗ್ರಾಮ ವಿದ್ಯಾರತ್ನ ರಸ್ತೆಯಲ್ಲಿ ಕಾರಿನಲ್ಲಿ ಕುಳಿತು ಚಾಕುವಿನಿಂದ ಕೈ, ಹೊಟ್ಟೆಗೆ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಉದ್ಯಮಿ, ಲಕ್ಷ್ಮೀಂದ್ರನಗರದ ನಿವಾಸಿ ಓಲಿವರ್ ವಿ.ಲೂವಿಸ್(68) ಅವರ ಮೃತದೇಹ ಪತ್ತೆಯಾಗಿದೆ.
ವಿದ್ಯಾರತ್ನ ನಗರದ ಲೂವಿಸ್ ಸಂಬಂಧಿಕರ ಮನೆ ಸಮೀಪವೇ ಭಾನುವಾರ ತಡರಾತ್ರಿ ಘಟನೆ ನಡೆದಿದೆ. ಲೂವಿಸ್ ಅವರು ಲಕ್ಷ್ಮೀಂದ್ರ ನಗರ, ಮಣಿಪಾಲ, ಸಂತೆಕಟ್ಟೆಯಲ್ಲಿ ಮನೆಯನ್ನು ಹೊಂದಿದ್ದಾರೆ. 12 ವರ್ಷ ಖಾಸಗಿ ಶಿಪ್ನ ಕ್ಯಾಪ್ಟನ್ ಆಗಿ ಕೆಲಸ ಮಾಡಿದ್ದ ಅವರು ನಿವೃತ್ತಿ ಬಳಿಕ ಬಿಲ್ಡರ್ ಆಗಿ ಕಾರ್ಯನಿರ್ವಹಿಸುತಿದ್ದರು ಎನ್ನಲಾಗಿದೆ. ಪೊಲೀಸರು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಕಾರಿನ ಬಲಭಾಗದ ಸೀಟ್ನಲ್ಲಿ ಮೃತದೇಹ ಸಂಪೂರ್ಣ ಮರಗಟ್ಟಿದ ಸ್ಥಿತಿಯಲ್ಲಿತ್ತು, ಲೂವೀಸ್ ಬಲಗೈನಲ್ಲಿ ಚಾಕು ಹಿಡಿದುಕೊಂಡಿದ್ದರು. ಯಾರೂ ನೋಡಬಾರದು ಎಂದು ಕಾರಿನ ಗ್ಲಾಸ್ ಮುಂಭಾಗ ಬಿಸಿಲಿಗೆ ಮುಚ್ಚುವ ಕವರ್ ಮುಚ್ಚಿದ್ದರು. ಕಾರನ್ನು ಲಾಕ್ ಮಾಡಿದ್ದರು. ಹೆಚ್ಚಿನ ಪ್ರಮಾಣದಲ್ಲಿ ಹೊಟ್ಟೆ ಕೊಯ್ದಿರುವುದರಿಂದ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿರುವ ಸಾಧ್ಯತೆ ಇದೆ. ಮಣಿಪಾಲ ವೈದ್ಯರು ಹಾಗೂ ಫಾರೆನ್ಸಿಕ್ ತಜ್ಞರು ಸ್ಥಳಕ್ಕಾಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಮಣಿಪಾಲದ ಕೆಎಂಸಿಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸ್ಥಳದಲ್ಲಿ ದೊರೆತ ಚಾಕು ಮತ್ತು ಮರಣಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…