ನಟಿ ರವೀನಾ ಟಂಡನ್ ಕಾರು ಅಪಘಾತದ ಬಗೆಗಿನ ಅಸಲಿ ವಿಚಾರ ಈಗ ಹೊರಬಿದ್ದಿದೆ. ನಟಿ ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ್ದಾರೆ. ಕೆಟ್ಟದಾಗಿ ಮಾತನಾಡಿದ್ದಾರೆ ಎಂದೆಲ್ಲಾ ಹೇಳಲಾಗಿತ್ತು. ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ರವೀನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಸಲಿ ಸಂಗತಿ ಈಗ ತಿಳಿದು ಬಂದಿದೆ. ನಟಿಯ ವಿರುದ್ಧ ಸುಳ್ಳು ದೂರು ದಾಖಲಿಸಿರುವ ಬಗ್ಗೆ ಡಿಸಿಪಿ ರಾಜ್ ತಿಲಕ್ ರೋಷನ್ ಸ್ಪಷನೆ ನೀಡಿದ್ದಾರೆ.
ರವೀನಾ ಟಂಡನ್ ಕಾರು ಮೂವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಾಯಗಳಾಗಿವೆ ಎಂದು ಹೇಳಲಾಗಿತ್ತು. ನಟಿಯ ವಿರುದ್ಧ ಕಿಡಿಕಾರಿದ್ದರು. ಅವರ ಮೇಲೆ ಹಲ್ಲೆ ಕೂಡ ಮಾಡಲಾಗಿತ್ತು. ಅಸಲಿಗೆ, ಸುಳ್ಳು ದೂರನ್ನು ದೂರುದಾರರು ನೀಡಿರುವ ಬಗ್ಗೆ ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ. ಅವರ ಕಾರು ಯಾರಿಗೂ ಡಿಕ್ಕಿ ಹೊಡೆದಿಲ್ಲ ಮತ್ತು ರವೀನಾ ಅಂದು ಕುಡಿದಿರಲಿಲ್ಲ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಅಸಲಿ ವಿಚಾರ ಹೊರಬಿದ್ದಿದೆ ಎಂದು ಡಿಸಿಪಿ ಕ್ಲ್ಯಾರಿಟಿ ನೀಡಿದ್ದಾರೆ.
ರವೀನಾ ಅವರು ಕಾರಿನಲ್ಲಿ ಮನೆಗೆ ಬರುತ್ತಿದ್ದರು. ಅವರ ಕಾರನ್ನು ರಿವರ್ಸ್ ತೆಗೆದುಕೊಳ್ಳಲಾಗಿತ್ತು. ಆದರೆ ಕಾರು ಯಾರಿಗೂ ಟಚ್ ಮಾಡಿಲ್ಲ. ಆದರೂ ಅಲ್ಲಿ ಮಾತಿನ ಚಕಮಕಿ ನಡೆದು ಈ ಘಟನೆ ವಿವಾದ ಸೃಷ್ಟಿಸಿದೆ. ಘಟನೆಯ ವೇಳೆ, ನಟಿ ಕಾರಿನಿಂದ ಹೊರಬಂದಿದ್ದು, ಜಗಳವಾಡಲು ಅಲ್ಲ. ಬದಲಾಗಿ ತನ್ನ ಚಾಲಕನನ್ನು ರಕ್ಷಿಸಲು ಎಂದು ಹೇಳಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಲಿಲ್ಲ ಎಂದು ಎಂಬುದು ಸಿಸಿಟಿವಿ ದೃಶ್ಯಾವಳಿಯಿಂದ ಸಾಬೀತಾಗಿದೆ. ಇದೆಲ್ಲಾ ಸುಳ್ಳು ಆರೋಪ ಎಂದು ಸ್ಪಷ್ಟನೆ ನೀಡಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…