ನಟಿ ರವೀನಾ ಟಂಡನ್ ಕಾರು ಅಪಘಾತದ ಬಗೆಗಿನ ಅಸಲಿ ವಿಚಾರ ಈಗ ಹೊರಬಿದ್ದಿದೆ. ನಟಿ ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ್ದಾರೆ. ಕೆಟ್ಟದಾಗಿ ಮಾತನಾಡಿದ್ದಾರೆ ಎಂದೆಲ್ಲಾ ಹೇಳಲಾಗಿತ್ತು. ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ರವೀನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಸಲಿ ಸಂಗತಿ ಈಗ ತಿಳಿದು ಬಂದಿದೆ. ನಟಿಯ ವಿರುದ್ಧ ಸುಳ್ಳು ದೂರು ದಾಖಲಿಸಿರುವ ಬಗ್ಗೆ ಡಿಸಿಪಿ ರಾಜ್ ತಿಲಕ್ ರೋಷನ್ ಸ್ಪಷನೆ ನೀಡಿದ್ದಾರೆ.
ರವೀನಾ ಟಂಡನ್ ಕಾರು ಮೂವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಾಯಗಳಾಗಿವೆ ಎಂದು ಹೇಳಲಾಗಿತ್ತು. ನಟಿಯ ವಿರುದ್ಧ ಕಿಡಿಕಾರಿದ್ದರು. ಅವರ ಮೇಲೆ ಹಲ್ಲೆ ಕೂಡ ಮಾಡಲಾಗಿತ್ತು. ಅಸಲಿಗೆ, ಸುಳ್ಳು ದೂರನ್ನು ದೂರುದಾರರು ನೀಡಿರುವ ಬಗ್ಗೆ ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ. ಅವರ ಕಾರು ಯಾರಿಗೂ ಡಿಕ್ಕಿ ಹೊಡೆದಿಲ್ಲ ಮತ್ತು ರವೀನಾ ಅಂದು ಕುಡಿದಿರಲಿಲ್ಲ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಅಸಲಿ ವಿಚಾರ ಹೊರಬಿದ್ದಿದೆ ಎಂದು ಡಿಸಿಪಿ ಕ್ಲ್ಯಾರಿಟಿ ನೀಡಿದ್ದಾರೆ.
ರವೀನಾ ಅವರು ಕಾರಿನಲ್ಲಿ ಮನೆಗೆ ಬರುತ್ತಿದ್ದರು. ಅವರ ಕಾರನ್ನು ರಿವರ್ಸ್ ತೆಗೆದುಕೊಳ್ಳಲಾಗಿತ್ತು. ಆದರೆ ಕಾರು ಯಾರಿಗೂ ಟಚ್ ಮಾಡಿಲ್ಲ. ಆದರೂ ಅಲ್ಲಿ ಮಾತಿನ ಚಕಮಕಿ ನಡೆದು ಈ ಘಟನೆ ವಿವಾದ ಸೃಷ್ಟಿಸಿದೆ. ಘಟನೆಯ ವೇಳೆ, ನಟಿ ಕಾರಿನಿಂದ ಹೊರಬಂದಿದ್ದು, ಜಗಳವಾಡಲು ಅಲ್ಲ. ಬದಲಾಗಿ ತನ್ನ ಚಾಲಕನನ್ನು ರಕ್ಷಿಸಲು ಎಂದು ಹೇಳಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಲಿಲ್ಲ ಎಂದು ಎಂಬುದು ಸಿಸಿಟಿವಿ ದೃಶ್ಯಾವಳಿಯಿಂದ ಸಾಬೀತಾಗಿದೆ. ಇದೆಲ್ಲಾ ಸುಳ್ಳು ಆರೋಪ ಎಂದು ಸ್ಪಷ್ಟನೆ ನೀಡಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…