ಚೆನ್ನೈ: ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ವಿಧ್ಯಾರ್ಥಿಗಳು ಸಾವನಪ್ಪಿದ ಘಟನೆ ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ತಿರುವಳ್ಳೂರು ಎಂಬಲ್ಲಿ ನಡೆದಿದೆ.
ಮೃತರನ್ನು ಚೈತನ್ಯ (21), ವಿಷ್ಣು (21), ಚೇತನ್, ಯುಕೇಶ್, ನಿತೀಶ್, ವರ್ಮಾ, ರಾಮ್ಕೋಮನ್ ಎಂದು ಗದುರುತಿಸಲಾಗಿದೆ. ಎಲ್ಲರೂ ಚೆನ್ನೈ ಎಸ್ಆರ್ಎಂ. ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ಇಂಜಿನಿಯರಿಂಗ್ ಓದುತ್ತಿದ್ದರು, ಈ ವೇಳೆ ನಿನ್ನೆ ರಜೆ ಇದ್ದ ಕಾರಣ 5 ಮಂದಿ ಚಿತ್ತೂರು ಜಿಲ್ಲೆಯ ಕಣ್ಣಿಪಾಕ್ಕಂ ವಿನಾಯಕ ದೇವಸ್ಥಾನಕ್ಕೆ ಕಾರಿನಲ್ಲಿ ತೆರಳಿ ಚೆನ್ನೈಗೆ ವಾಪಸಾಗಿದ್ದರು. ತಿರುವಳ್ಳೂರು ಜಿಲ್ಲೆಯ ರಾಮಂಚೇರಿಯಲ್ಲಿ ಕಾರು ಸಾಗುತ್ತಿದ್ದಾಗ ರಾಜಸ್ಥಾನ ನೋಂದಣಿ ಫಲಕದ ಕಂಟೈನರ್ ಲಾರಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಇದರಲ್ಲಿ ಚೇತನ್, ಯುಕೇಶ್, ನಿತೀಶ್, ವರ್ಮಾ ಮತ್ತು ರಾಮಕೋಮನ್ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚೈತನ್ಯ ಮತ್ತು ವಿಷ್ಣು ಎಂಬ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ತಿರುವಳ್ಳೂರು ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಪೆರುಮಾಳ್ ಭೇಟಿ ನೀಡಿ ವಾಹನದಲ್ಲಿ ಸಿಲುಕಿದ್ದ ಯುವಕರ ಮೃತದೇಹಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕನಕಮ್ಮಸತ್ರಂ ಪೊಲೀಸ್ ಇಲಾಖೆ ಅಪಘಾತದ ತನಿಖೆ ನಡೆಸುತ್ತಿದೆ. ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ 5 ಜನರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಿರುವಳ್ಳೂರ್ ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಸಂಬಂಧಿಕರು ಆಂಧ್ರಪ್ರದೇಶದವರು ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…