ಉಡುಪಿ

ಕಾರ್ಕಳದಲ್ಲಿ ಮುನಿಯಾಲು ಬಂಡಾಯ ಅಭ್ಯರ್ಥಿಯಾದರೇ ಭಂಡಾರಿಗೆ ಸೋಲು ಕಟ್ಟಿಟ್ಟ ಬುತ್ತಿ..!

ಕಾರ್ಕಳ: ಹೌದು ಕಾರ್ಕಳದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಕಾಂಗ್ರೇಸ್ ಟಿಕೆಟ್ ಕಡೆಗೂ ಮಾಜಿ ಶಾಸಕ ಗೋಪಾಲ ಭಂಢಾರಿ ಮುಡಿಗೇರಿದೆ. ಆದರೆ ಈ ಸಲದ ಮಟ್ಟಿಗೆ ಮಾತ್ರ ಈಡೀ ಯುವ ಸಮಾಜ ಗೋಪಾಲ ಭಂಡಾರಿ ಬದಲು ಉದಯ್ ಶೆಟ್ಟಿ ಬೆನ್ನ ಹಿಂದೆ ನಿಂತಿದೆ. ಕಾರ್ಕಳ ಕಾಂಗ್ರೇಸ್‍ನಲ್ಲಿ ತಲ್ಲಣಮೂಡಿಸಿದ್ದ ಉದಯ್ ಶೆಟ್ಟಿ ಗೆ ಟಿಕೆಟ್ ಸಿಗುವುದು ಖಚಿತವೆನ್ನುವಷ್ಟು ಕಾರ್ಯಕರ್ತರು ಹುಮ್ಮಸಿನಲ್ಲಿದರು ಅದರೆ ಶೆಟ್ರಿಗೆ ಟಿಕೆಟ್ ಮಿಸ್ ಆಗಿರುವುದು ಬೆಂಬಲಿಗರ ಅಸವiಧಾನಕ್ಕೆ ಕಾರಣವಾಗಿದೆ.
ಗೋಪಾಲ ಭಂಡಾರಿ ಕಳೆದೆರಡು ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದರೂ ಕೂಡ ಮತ್ತೆ ಈ ಸಲದ ಟಿಕೆಟ್ ಗೋಪಾಲರಿಗೆ ನೀಡಿರುವುದು ಕಾಂಗ್ರೇಸ್ ತನ್ನ ಸೋಲನ್ನ ತಾನೇ ಒಪ್ಪಿಕೊಂಡಂತೆ ಎಂಬ ಮಾತು ಕೇಳಿ ಬರುತ್ತಿದೆ.


ಮುನಿಯಾಲ್ ಹವಾ
ಹೌದು ಮೂರು ನಾಲ್ಕು ವರ್ಷದಿಂದ ಕ್ಷೇತ್ರದಾದ್ಯಂತ ಸಂಚರಿಸಿ ಪ್ರತಿಯೊಂದು ಮನೆ ಮನೆಯಲ್ಲೂ ಉದಯ್ ಶೆಟ್ಟಿ ಹೆಸರನ್ನ ಅಚ್ಚು ಹಾಕಿ ಬಂದವರು, ಯುವ ಸಮುದಾಯವಂತೂ ಉದಯ್ ಶೆಟ್ಟಿಯ ಬೆನ್ನೆಲುಬಾಗಿ ಸಹಕರಿಸುತ್ತಿದ್ದು ಮಾತ್ರವಲ್ಲದೆ, ಮನೆಮನೆ ಕಾಂಗ್ರೇಸ್ ಅಭಿಯಾನದಲ್ಲಿ ಮುಂಚೂನಿಯಲ್ಲಿ ಕಾರ್ಯ ನಿರ್ವಹಿಸಿದ ಶೆಟ್ಟಿ ಅಶಕ್ತರ, ಧೀನ ದಲಿತರ,ಬಡವರ ಪರ ತೋರುತ್ತಿದ್ದ ಕಾಳಜಿ ಶಾಲಾ ಮಕ್ಕಳಿಗೆ ಸಹಾಯಧನ ವಿತರಣೆ, ಬಡ ಹೆಣ್ಣು ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಸಹಕರಿಸುತ್ತಿದ್ದುದು ಜನ ಮೆಚ್ಚುವಂತಿತ್ತು.

 

ಶೆಟ್ರು ಬಂಡಾಯ ಅಭ್ಯರ್ಥಿಯಾದರೇ, ಭಂಡಾರಿ ಸೋಲು
ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ 24 ರ ಒಳಗಡೆ ಟಿಕೆಟ್ ಗೊಂದಲ ಸರಿ ಮಾಡದೆ ಹೋದಲ್ಲಿ, ಬಲಿಷ್ಟ ಯುವ ಪಡೆಯನ್ನ ಹೊಂದಿರುವ ಮತ್ತು ಆರ್ಥಿಕ-ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಉದಯ್ ಶೆಟ್ಟಿ ಬೆಂಬಲಿಗರ ಒತ್ತಾಯಕ್ಕೆ ಮಣಿದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಕಾರ್ಕಳದಲ್ಲಿ ಮಾಜಿ ಶಾಸಕ ಗೋಪಾಲ ಭಂಡಾರಿ ಉದಯ್ ಮತ್ತು ಸುನಿಲ್ ಕುಮಾರ್ ಎದುರಿಗೆ ಡೆಪಾಸಿಟ್ ಕಳೆದುಕೊಳ್ಳುವುದರಲ್ಲಿ ಅನುಮಾನವಿಲ್ಲ ಎಂಬ ಮಾತು ಕೂಡ ಕಾರ್ಕಳ ವಲಯದಿಂದ ಕೇಳಿಬರುತ್ತಿದೆ.

 

ಸುನೀಲ್ ಎದುರಿಸಲು ಉದಯ್ ಶೆಟ್ಟಿ ಫಿಟ್
ಹೌದು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸುನೀಲ್ ಕುಮಾರ್ ಪ್ರಸ್ತುತ ಶಾಸಕರಾಗಿರುವುದರಿಂದ ಅವರ ಹವಾ ಜೋರಾಗಿಯೇ ಇದೆ , ಆದರೇ ಸುನಿಲ್ ಕುಮಾರನನ್ನು ಎದುರಿಸಲು ಸರಿಯಾದ ಅಭ್ಯರ್ಥಿ ಉದಯ್ ಶೆಟ್ಟಿ ಎಂಬ ಮಾತು ಹೊರವಲಯದಿಂದ ಕೇಳಿಬರುತ್ತಿದೆ.
ಬಿಜೆಪಿ ಅಭ್ಯರ್ಥಿ ಸುನಿಲ್‍ಗೆ ಇರುವಷ್ಟೇ ಬೆಂಬಲಿಗರು ಕಾರ್ಕಳದಲ್ಲಿ ಉದಯ್ ಶೆಟ್ಟಿ ಬೆನ್ನ ಹಿಂದೆ ಇರುವುದು ಇವರಿಗೆ ವರದಾನವಾಗಿದೆ.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

2 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

2 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

2 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

2 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

3 hours ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago