ಕಾರ್ಕಳ: ಕರ್ನಾಟಕ ಒಲಿಂಪಿಕ್ ಸಂಸ್ಥೆ(ಕೆಒಎ) ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಠಿತ ಕೆಒಎ ಪ್ರಶಸ್ತಿಗೆ ಕಾರ್ಕಳದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿ ಭಾಜನರಾಗಿದ್ದಾರೆ.
ರವಿವಾರ ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಈ ಗೌರವವನ್ನು ನೀಡಿ ಸಮ್ಮಾನಿಸಲಾಯಿತು. ರಾಜ್ಯಪಾಲ ಥಾವರ್ಚಂದ್ ಗೆಹೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಷ್ ಶೆಟ್ಟಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಕ್ರೀಡಾ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಆಯುಷ್ ಶೆಟ್ಟಿ, ಕಿರಿಯ ವಯಸ್ಸಿನಲ್ಲೇ ಬ್ಯಾಡ್ಮಿಂಟನ್ ಲೋಕದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪ್ರತಿಭೆಯಾಗಿದ್ದು, ಇತ್ತೀಚೆಗೆ ಯುಎಸ್ ಓಪನ್ ಬಿಡಬ್ಲ್ಯೂಎಫ್ ಸೂಪರ್ 300 ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಜಯಗಳಿಸಿ ಚಾಂಪಿಯನ್ ಪಟ್ಟ ಪಡೆದಿದ್ದರು. ಆಯುಷ್ ಅವರು ಕಾರ್ಕಳ ಸಾಣೂರಿನ ಮಿತ್ತಲ ಮನೆಯ ರಾಮ್ ಪ್ರಕಾಶ್ ಶೆಟ್ಟಿ ಮತ್ತು ಶಾಲ್ಮಲಿ ದಂಪತಿ ಪುತ್ರ.
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…
ಗ್ಯಾಸ್ ಏಜೆನ್ಸಿಗಳಿಂದ ಎಲ್ಪಿಜಿ ಪೂರೈಕೆ: ನೆಟ್ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್ವರ್ಕ್…
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…