ಕಾರ್ಕಳ: ಕರ್ನಾಟಕ ಒಲಿಂಪಿಕ್ ಸಂಸ್ಥೆ(ಕೆಒಎ) ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಠಿತ ಕೆಒಎ ಪ್ರಶಸ್ತಿಗೆ ಕಾರ್ಕಳದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿ ಭಾಜನರಾಗಿದ್ದಾರೆ.
ರವಿವಾರ ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಈ ಗೌರವವನ್ನು ನೀಡಿ ಸಮ್ಮಾನಿಸಲಾಯಿತು. ರಾಜ್ಯಪಾಲ ಥಾವರ್ಚಂದ್ ಗೆಹೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಷ್ ಶೆಟ್ಟಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಕ್ರೀಡಾ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಆಯುಷ್ ಶೆಟ್ಟಿ, ಕಿರಿಯ ವಯಸ್ಸಿನಲ್ಲೇ ಬ್ಯಾಡ್ಮಿಂಟನ್ ಲೋಕದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪ್ರತಿಭೆಯಾಗಿದ್ದು, ಇತ್ತೀಚೆಗೆ ಯುಎಸ್ ಓಪನ್ ಬಿಡಬ್ಲ್ಯೂಎಫ್ ಸೂಪರ್ 300 ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಜಯಗಳಿಸಿ ಚಾಂಪಿಯನ್ ಪಟ್ಟ ಪಡೆದಿದ್ದರು. ಆಯುಷ್ ಅವರು ಕಾರ್ಕಳ ಸಾಣೂರಿನ ಮಿತ್ತಲ ಮನೆಯ ರಾಮ್ ಪ್ರಕಾಶ್ ಶೆಟ್ಟಿ ಮತ್ತು ಶಾಲ್ಮಲಿ ದಂಪತಿ ಪುತ್ರ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…