ಕಾರ್ಕಳ: ಕುಕ್ಕುಂದೂರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪ್ರಭಾವತಿಯವರ ಅಮಾನತು ಆದೇಶವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿಂದಕ್ಕೆ ಪಡೆದಿದೆ. ಕುಕ್ಕುಂದೂರು ಗ್ರಾ.ಪಂ. ಅನುದಾನದಿಂದ ನಿರ್ಮಿಸಲಾಗಿರುವ ಹೆಚ್ಚುವರಿ ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಸುನಿಲ್ ಕುಮಾರ್ ಅವರನ್ನು ಆಹ್ವಾನ ಮಾಡಲಿಲ್ಲ. ಇದರ ಬಗ್ಗೆ ಮಾಹಿತಿ ಕಲೆ ಹಾಕಿ ಸೆಪ್ಟೆಂಬರ್ 4ರಂದು ಇಲಾಖೆ ಅಮಾನತು ಮಾಡಿತ್ತು.
ಅಮಾನತು ಆದೇಶ ಬಳಿಕ ಪುನಃ ಈ ಬಗ್ಗೆ ಪರಿಶೀಲನೆ ಮಾಡಿದ ಬಳಿಕ ಇಂದು ಅವರನ್ನು ಮರಳಿ ಗೌರವ ಧನ ಸೇವೆಗೆ ತೆರಳಲು ಇಲಾಖೆ ಆದೇಶ ನೀಡಿದೆ.
ಕುಕ್ಕುಂದೂರು ಗ್ರಾ.ಪಂ. ಅನುದಾನದಿಂದ ನಿರ್ಮಿಸಲಾಗಿ ರುವ ಕೊಠಡಿಯ ಉದ್ಘಾಟನೆ ಅಂಗ ವಾಗಿ ಆ.28ರಂದು ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ವತಿಯಿಂದ ಏರ್ಪಡಿಸಿರುವ ಗಣ ಹೋಮ ಹಾಗೂ ಹೆಚ್ಚುವರಿ ಕೊಠಡಿ ಉದ್ಘಾಟನೆ ಮಾಹಿತಿಯನ್ನು ಇಲಾಖೆ ಅಥವಾ ಸ್ಥಳೀಯ ಶಾಸಕರ ಗಮನಕ್ಕೆ ತಂದಿರಲಿಲ್ಲ.
ಕಾರ್ಯಕ್ರಮ ನಡೆದಿರುವ ಬಗ್ಗೆ ಸ್ಥಳೀಯರಿಂದ ಇಲಾಖೆಗೆ ತಿಳಿದು ಬಂದಿದ್ದು, ಇದು ಶಿಷ್ಟಾಚಾರ ಉಲ್ಲಂಘನೆ ಆಗಿರುತ್ತದೆ. ಇದಕ್ಕೆ ಸಂಬಂಧಿಸಿ ಜಯಂತಿನಗರ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಂಬಂಧಪಟ್ಟ ವಲಯ ಮೇಲ್ವಿಚಾರಕಿಗೆ ಕಾರಣ ಕೇಳಿ ಇಲಾಖೆಯಿಂದ ನೋಟೀಸು ನೀಡಲಾಗಿತ್ತು.
ಅಂಗನವಾಡಿ ಕಾರ್ಯಕರ್ತೆ ಮತ್ತು ವಲಯ ಮೇಲ್ವಿಚಾರಕಿ ನೋಟಿಸಿಗೆ ಸಮಜಾಯಿಷಿ ನೀಡಿದ್ದರು. ಸದರಿ ಅಂಗನವಾಡಿ ಕಾರ್ಯಕರ್ತೆಯ ಕರ್ತವ್ಯ ಲೋಪದ ಕುರಿತು ಕೈಗೊಳ್ಳಲು ಅಂಗನವಾಡಿ ಕಾರ್ಯ ಕರ್ತೆ, ಸಹಾಯಕಿಯರ ಆಯ್ಕೆ ಸಮಿತಿ ಅಧ್ಯಕ್ಷೆ ಜಿಲ್ಲಾಧಿಕಾರಿ ಯವರು ಉಲ್ಲೇಖ (6)ರನ್ವಯ ಜಯಂತಿ ನಗರ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪ್ರಭಾವತಿ ಯವ ರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…