ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಶ್ರಪ್ ಆಲಿ ಎಂಬವನ ಮನೆಯಲ್ಲಿ ಅಕ್ರಮವಾಗಿ ದನಗಳನ್ನು ಕೂಡಿ ಹಾಕಿ ಕಡಿದು ಮಾಂಸ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಇವತ್ತು ಬೆಳಿಗ್ಗೆ ಪತ್ತೆಯಾಗಿದೆ. ಸುಮಾರು 200 kg ಮಾಂಸ ಪತ್ತೆಯಾಗಿದ್ದು ಪಕ್ಕದಲ್ಲಿ ಹೋರಿಯನ್ನು ಕಟ್ಟಿ ಹಾಕಿದ್ದು, ಅದಲ್ಲದೇ ಅಲ್ಲೇ ರಕ್ತದ ಕುರುಹು ಮತ್ತು ದನದ ತ್ಯಾಜ್ಯಗಳು ಪತ್ತೆಯಾಗಿದೆ.
ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೋಲಿಸರೊಂದಿಗೆ ಹಿಂದೂ ಸಂಘಟನೆ ಇಂದು ಬೆಳಗ್ಗೆ ದಾಳಿ ನಡೆಸಿದೆ.
ಈ ಕುರಿತು ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ತಕ್ಷಣ ಅಶ್ರಪ್ ನನ್ನು ಬಂಧಿಸಬೇಕು, ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ಅವನ ಮನೆಯನ್ನು ಹಾಗೂ ಗೋ ವಧೆಗೆ ಬಳಸಿಕೊಂಡಿರುವ ಎಲ್ಲಾ ಜಾಗವನ್ನು ಸರಕಾರ ಮುಟ್ಟುಗೋಲು ಹಾಕಬೇಕು. ಅಶ್ರಫ್ ಎನ್ನುವಾತ ಕ್ರಿಮಿನಲ್ ಹಿನ್ನೆಲೆಯುಳ್ಳವನಾಗಿದ್ದು ಮುಂಬೈ ನಿಂದ ಗಡಿಪಾರು ಮಾಡಿದ ನಂತರ ಕಾರ್ಕಳದಲ್ಲಿ ನೆಲೆಸಿ ಇಲ್ಲಿಯೂ ತನ್ನ ಅಪರಾಧ ಚಟುವಟಿಕೆಗಳನ್ನು ಮುಂದುವರೆಸುತ್ತಾ ಬಂದಿರುತ್ತಾನೆ ಆದ್ದರಿಂದ ಪೋಲಿಸ್ ಇಲಾಖೆ ಈತನ ಮೇಲೆ ಅತ್ಯಂತ ಪ್ರಬಲ ಕಾನೂನು ಕ್ರಮ ಕೈಗೊಳ್ಳುವಂತೆ ಬಜರಂಗದಳ ಆಗ್ರಹಿಸಿದೆ
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…