ಕಾರ್ಕಳ : ಕೌಡೂರು ಗ್ರಾಮದ ಪಳ್ಳಿಕ್ರಾಸ್ ಬಳಿ ವಾಹನದಲ್ಲಿ ಜಾನುವಾರು ಅಕ್ರಮ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ವಾಹನ ಹಾಗೂ ಎರಡು ಗಂಡು ಕರುಗಳನ್ನು ನಗರ ಠಾಣೆಯ ಪೊಲೀಸರು ಭಾನುವಾರ ಬೆಳೆಗ್ಗೆ ವಶಪಡಿಸಿ ಪಡಿಸಿಕೊಂಡಿದ್ದಾರೆ.
ರಂಗನಪಲ್ಕೆ ಕಡೆಯಿಂದ ಬರುತ್ತಿದ್ದ ಪಿಕಪ್ ಗೂಡ್ಸ್ ವಾಹನವನ್ನು ತಡೆದು ನಿಲ್ಲಿಸಿದ ಸಂದರ್ಭ ಘಟನೆ ಬೆಳಕಿಗೆ ಬಂದಿದೆ. ವಾಹನದಲ್ಲಿ ಹಿಂಸಾತ್ಮಾಕ ರೀತಿಯಲ್ಲಿಎರಡು ಗಂಡು ಕರುಗಳ ಕಾಲಿಗೆ ಹಗ್ಗವನ್ನು ಕಟ್ಟಿ ಹಿಂಸಾತ್ಮಾಕ ರೀತಿಯಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದರು. ವಾಹನದಲ್ಲಿದ್ದ ಆರೋಪಿಗಳನ್ನು ವಿಚಾರಿಸಿದ ವೇಳೆ ಕೌಡೂರು ಗ್ರಾಮದ ಮಾಣಿಕು ಮೇರಿಯ ಹಟ್ಟಿಯಲ್ಲಿದ್ದ ಗಂಡು ಕರುವನ್ನು ಮೂವರು ಸೇರಿ ಕಳವು ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ.
ಪಿಕಪ್ ವಾಹನದ ಚಾಲಕ ರವೀಂದ್ರ, ಪಿಕಪ್ ವಾಹನದಲ್ಲಿದ್ದ ಹಮೀದ್ ಸಾಹೇಬ್, ಮಹಾಬಲ ಪೂಜಾರಿ ಇವರನ್ನು ಬಂಧಿಸಲಾಗಿದೆ. ಮೂವರ ವಿರುದ್ದ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೇಸುದಾಖಲಾಗಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…