ಕಾರ್ಕಳ: ಕಾರ್ಕಳದ ಅತ್ತೂರು ಗ್ರಾಮದಲ್ಲಿರುವ ಪರ್ಪಲೆ ಗುಡ್ಡದ ಮೇಲೆ ಅನೇಕ ಶತಮಾನಗಳಿಂದ ಸುಪ್ತಾವಸ್ಥೆಯಲ್ಲಿರುವ ದೈವ ಸಾನಿದ್ಯವನ್ನು ಮತ್ತೆ ಜಾಗೃತ ಸ್ಥಿತಿಗೆ ತರುವ ಉದ್ದೇಶದಿಂದ ಹಿಂದೂ ಜಾಗರಣ ವೇದಿಕೆ ಕಾರ್ಕಳ ಮತ್ತು ಶ್ರೀ ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ಕಾರ್ಕಳ ಇವರ ನೇತೃತ್ವದಲ್ಲಿ ನವೆಂಬರ್ 26-28ರವರೆಗೆ ಮೂರುದಿನ ಕಾರ್ಕಳ ಪರ್ಪಲೆ ಗಿರಿಯಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನ ಕಾರ್ಯಕ್ರಮ ಆಯೋಜಿಸಿದೆ ಎಂದು ಹಿಂದೂ ಜಾಗರಣ ವೇದಿಕೆಯ ಪ್ರಕಾಶ್ ಕುಕ್ಕೆಹಳ್ಳಿ ತಿಳಿಸಿದರು.
ಅವರು ಮಂಗಳವಾರ ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠೀಯಲ್ಲಿ ಮಾತನಾಡಿ ಕಳೆದ ಒಂದು ದಶಕದಿಂದ ಕರಾವಳಿ ಭಾಗದಲ್ಲಿ ದೇವಾಲಯದ ಜೀರ್ಣೋದ್ಧಾರದ ಸಂಕ್ರಮಣ ಕಾಲ ಆರಂಭವಾಗಿದೆ. ಆರಾಧನೆ ಅನುಷ್ಠಾನಗಳು ನಿಂತು ಹೋದ ಅನೇಕ ದೇವಸ್ಥಾನಗಳು ಮತ್ತೆ ಪ್ರವರ್ಧಮಾನಕ್ಕೆ ಬರುತ್ತಿರುವುದನ್ನು ನಾವು ಕಂಡಿದ್ದೇವೆ. ಕಾರ್ಕಳದ ಅತ್ತೂರು ಗ್ರಾಮದಲ್ಲಿರುವ ಪರ್ಪಲೆ ಗುಡ್ಡದಮೇಲೆ ಅನೇಕ ಶತಮಾನಗಳಿಂದ ಸುಪ್ತಾವಸ್ಥೆಯಲ್ಲಿರುವ ದೈವ ಸಾನಿದ್ಯವನ್ನು ಮತ್ತೆ ಜಾಗೃತ ಸ್ಥಿತಿಗೆ ತರಲು ಗ್ರಾಮಸ್ಥರು ಮುಂದಾಗಿದ್ದಾರೆ.
ಕಾರ್ಕಳ ನಗರ ಮತ್ತು ಅತ್ತೂರು ಸುತ್ತಮುತ್ತ ಹಲವಾರು ಕಡೆ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮುಂದಾದಾಗ ಈ ಕ್ಷೇತ್ರದ ಜೀರ್ಣೋದ್ಧಾರವನ್ನು ಮೊದಲು ಮಾಡತಕ್ಕದ್ದು ಎಂದು ಅಷ್ಟಮಂಗಲ ಪ್ರಶ್ನೆಗಳಲ್ಲಿ ಕಂಡು ಬಂದಿರುತ್ತದೆ. ಇಲ್ಲಿ ದೈವೀಶಕ್ತಿ ಗಳು ಚರಾವಸ್ಥೆಯಲ್ಲಿ ಇರುವುದರಿಂದ ಗ್ರಾಮಸ್ಥರಿಗೆ ಅನೇಕ ರೀತಿಯ ಸಮಸ್ಯೆಗಳು ಎದುರಾದ ಉದಾಹರಣೆ ಇದೆ. ಸೂಕ್ತ ಮುಂದಾಳತ್ವ ಇಲ್ಲದ ಕಾರಣ ಈ ಜೀರ್ಣೋದ್ಧಾರ ಕಾರ್ಯಕ್ಕೆ ಯಾರೂ ಕೂಡ ಕೈಹಾಕಿರಲಿಲ್ಲ. ಈಗ ಈ ಭಗವತ್ ಕಾರ್ಯಕ್ಕೆ ಹಿಂದೂ ಜಾಗರಣ ವೇದಿಕೆ ಮುಂದಾಳತ್ವ ವಹಿಸಿ ಕೊಂಡಿದ್ದು, ಜಿಲ್ಲೆಯ ಆಸ್ತಿಕ ಭಕ್ತರ ಸಂಪೂರ್ಣ ಬೆಂಬಲ ಇದಕ್ಕೆ ಲಭಿಸಿದೆ.
ಬರುವ ಭಕ್ತಾದಿಗಳಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಕಾರ್ಕಳ ಬಸ್ ನಿಲ್ದಾಣದಿಂದ ಉಚಿತ ಬಸ್ಸಿನ ವ್ಯವಸ್ಥೆ ಇರುತ್ತದೆ ಎಂದರು.
ಸಾನಿಧ್ಯ ಪುನರ್ನಿರ್ಮಾಣ ನಿಮಿತ್ತ ಅತ್ತೂರು ಪರ್ಪಲೆ ಗಿರಿಯಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆ ಆಯೋಜಿಸಲಾಗಿದ್ದು, ಕೇರಳದ ಪಯ್ಯನ್ನೂರಿನ ಖ್ಯಾತ ದೈವಜ್ಞ ರಾದ ಶ್ರೀ ನಾರಾಯಣ ಪೊದುವಾಲ್ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಮೂರು ದಿನಗಳ ಪರ್ಯಂತ ನಡೆಯಲಿರುವ ಅಷ್ಟಮಂಗಲ ಪ್ರಶ್ನಾ ಚಿಂತನೆಗೆ ನಾಡಿನ ವಿವಿಧ ಭಾಗಗಳಿಂದ ಗಣ್ಯರು ಆಗಮಿಸಲಿದ್ದಾರೆ. ಈ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಾರ್ಕಳದ ಇತಿಹಾಸಕ್ಕೆ ಸಂಬಂಧಿಸಿದ ಅನೇಕ ಸಂಗತಿಗಳು ಮುನ್ನೆಲೆಗೆ ಬರುವ ಸಾಧ್ಯತೆ ಇದ್ದು, ಹೀಗಾಗಿ ಈ ಕಾರ್ಯಕ್ರಮ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.
ಸುದ್ದಿಗೋಷ್ಠೀಯಲ್ಲಿ ಅಧ್ಯಕ್ಷರು ಶ್ರೀ ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ಕಾರ್ಕಳ ಇದರ ಪ್ರಶಾಂತ ನಾಯಕ್, ಗುರುಪ್ರಸಾದ್ ಶೆಟ್ಟಿ ನಾರಾವಿ, ತಾಲೂಕು ಕಾರ್ಯದರ್ಶಿಗಳು ಹಿಂದೂ ಜಾಗರಣ ವೇದಿಕೆ ಕಾರ್ಕಳ, ಮಹೇಶ್ ಬೈಲೂರು, ದಿನೇಶ್ ಶೆಟ್ಟಿ ಹೆಬ್ರಿ, ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…