ಕಾರ್ಕಳ: ಅತ್ತೂರು ಗ್ರಾಮದ ಪರ್ಪಲೆ ಗಿರಿಯಲ್ಲಿ ನವೆಂಬರ್ 26-28ರವರೆಗೆ ಅಷ್ಟಮಂಗಲ ಪ್ರಶ್ನಾ ಚಿಂತನ ಕಾರ್ಯಕ್ರಮ -Vishwanews24

ಕಾರ್ಕಳ: ಅತ್ತೂರು ಗ್ರಾಮದ ಪರ್ಪಲೆ ಗಿರಿಯಲ್ಲಿ ನವೆಂಬರ್ 26-28ರವರೆಗೆ ಅಷ್ಟಮಂಗಲ ಪ್ರಶ್ನಾ ಚಿಂತನ ಕಾರ್ಯಕ್ರಮ -Vishwanews24

ಕಾರ್ಕಳ: ಕಾರ್ಕಳದ ಅತ್ತೂರು ಗ್ರಾಮದಲ್ಲಿರುವ ಪರ್ಪಲೆ ಗುಡ್ಡದ ಮೇಲೆ ಅನೇಕ ಶತಮಾನಗಳಿಂದ ಸುಪ್ತಾವಸ್ಥೆಯಲ್ಲಿರುವ ದೈವ ಸಾನಿದ್ಯವನ್ನು ಮತ್ತೆ ಜಾಗೃತ ಸ್ಥಿತಿಗೆ ತರುವ ಉದ್ದೇಶದಿಂದ ಹಿಂದೂ ಜಾಗರಣ ವೇದಿಕೆ ಕಾರ್ಕಳ ಮತ್ತು ಶ್ರೀ ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ಕಾರ್ಕಳ ಇವರ ನೇತೃತ್ವದಲ್ಲಿ ನವೆಂಬರ್ 26-28ರವರೆಗೆ ಮೂರುದಿನ ಕಾರ್ಕಳ ಪರ್ಪಲೆ ಗಿರಿಯಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನ ಕಾರ್ಯಕ್ರಮ ಆಯೋಜಿಸಿದೆ ಎಂದು ಹಿಂದೂ ಜಾಗರಣ ವೇದಿಕೆಯ ಪ್ರಕಾಶ್ ಕುಕ್ಕೆಹಳ್ಳಿ ತಿಳಿಸಿದರು.

ಅವರು ಮಂಗಳವಾರ ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠೀಯಲ್ಲಿ ಮಾತನಾಡಿ ಕಳೆದ ಒಂದು ದಶಕದಿಂದ ಕರಾವಳಿ ಭಾಗದಲ್ಲಿ ದೇವಾಲಯದ ಜೀರ್ಣೋದ್ಧಾರದ ಸಂಕ್ರಮಣ ಕಾಲ ಆರಂಭವಾಗಿದೆ. ಆರಾಧನೆ ಅನುಷ್ಠಾನಗಳು ನಿಂತು ಹೋದ ಅನೇಕ ದೇವಸ್ಥಾನಗಳು ಮತ್ತೆ ಪ್ರವರ್ಧಮಾನಕ್ಕೆ ಬರುತ್ತಿರುವುದನ್ನು ನಾವು ಕಂಡಿದ್ದೇವೆ. ಕಾರ್ಕಳದ ಅತ್ತೂರು ಗ್ರಾಮದಲ್ಲಿರುವ ಪರ್ಪಲೆ ಗುಡ್ಡದಮೇಲೆ ಅನೇಕ ಶತಮಾನಗಳಿಂದ ಸುಪ್ತಾವಸ್ಥೆಯಲ್ಲಿರುವ ದೈವ ಸಾನಿದ್ಯವನ್ನು ಮತ್ತೆ ಜಾಗೃತ ಸ್ಥಿತಿಗೆ ತರಲು ಗ್ರಾಮಸ್ಥರು ಮುಂದಾಗಿದ್ದಾರೆ.

ಕಾರ್ಕಳ ನಗರ ಮತ್ತು ಅತ್ತೂರು ಸುತ್ತಮುತ್ತ ಹಲವಾರು ಕಡೆ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮುಂದಾದಾಗ ಈ ಕ್ಷೇತ್ರದ ಜೀರ್ಣೋದ್ಧಾರವನ್ನು ಮೊದಲು ಮಾಡತಕ್ಕದ್ದು ಎಂದು ಅಷ್ಟಮಂಗಲ ಪ್ರಶ್ನೆಗಳಲ್ಲಿ ಕಂಡು ಬಂದಿರುತ್ತದೆ. ಇಲ್ಲಿ ದೈವೀಶಕ್ತಿ ಗಳು ಚರಾವಸ್ಥೆಯಲ್ಲಿ ಇರುವುದರಿಂದ ಗ್ರಾಮಸ್ಥರಿಗೆ ಅನೇಕ ರೀತಿಯ ಸಮಸ್ಯೆಗಳು ಎದುರಾದ ಉದಾಹರಣೆ ಇದೆ. ಸೂಕ್ತ ಮುಂದಾಳತ್ವ ಇಲ್ಲದ ಕಾರಣ ಈ ಜೀರ್ಣೋದ್ಧಾರ ಕಾರ್ಯಕ್ಕೆ ಯಾರೂ ಕೂಡ ಕೈಹಾಕಿರಲಿಲ್ಲ. ಈಗ ಈ ಭಗವತ್ ಕಾರ್ಯಕ್ಕೆ ಹಿಂದೂ ಜಾಗರಣ ವೇದಿಕೆ ಮುಂದಾಳತ್ವ ವಹಿಸಿ ಕೊಂಡಿದ್ದು, ಜಿಲ್ಲೆಯ ಆಸ್ತಿಕ ಭಕ್ತರ ಸಂಪೂರ್ಣ ಬೆಂಬಲ ಇದಕ್ಕೆ ಲಭಿಸಿದೆ.

ಬರುವ ಭಕ್ತಾದಿಗಳಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಕಾರ್ಕಳ ಬಸ್ ನಿಲ್ದಾಣದಿಂದ ಉಚಿತ ಬಸ್ಸಿನ ವ್ಯವಸ್ಥೆ ಇರುತ್ತದೆ ಎಂದರು.

ಸಾನಿಧ್ಯ ಪುನರ್ನಿರ್ಮಾಣ ನಿಮಿತ್ತ ಅತ್ತೂರು ಪರ್ಪಲೆ ಗಿರಿಯಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆ ಆಯೋಜಿಸಲಾಗಿದ್ದು, ಕೇರಳದ ಪಯ್ಯನ್ನೂರಿನ ಖ್ಯಾತ ದೈವಜ್ಞ ರಾದ ಶ್ರೀ ನಾರಾಯಣ ಪೊದುವಾಲ್ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಮೂರು ದಿನಗಳ ಪರ್ಯಂತ ನಡೆಯಲಿರುವ ಅಷ್ಟಮಂಗಲ ಪ್ರಶ್ನಾ ಚಿಂತನೆಗೆ ನಾಡಿನ ವಿವಿಧ ಭಾಗಗಳಿಂದ ಗಣ್ಯರು ಆಗಮಿಸಲಿದ್ದಾರೆ. ಈ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಾರ್ಕಳದ ಇತಿಹಾಸಕ್ಕೆ ಸಂಬಂಧಿಸಿದ ಅನೇಕ ಸಂಗತಿಗಳು ಮುನ್ನೆಲೆಗೆ ಬರುವ ಸಾಧ್ಯತೆ ಇದ್ದು, ಹೀಗಾಗಿ ಈ ಕಾರ್ಯಕ್ರಮ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.

ಸುದ್ದಿಗೋಷ್ಠೀಯಲ್ಲಿ ಅಧ್ಯಕ್ಷರು ಶ್ರೀ ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ಕಾರ್ಕಳ ಇದರ ಪ್ರಶಾಂತ ನಾಯಕ್, ಗುರುಪ್ರಸಾದ್ ಶೆಟ್ಟಿ ನಾರಾವಿ, ತಾಲೂಕು ಕಾರ್ಯದರ್ಶಿಗಳು ಹಿಂದೂ ಜಾಗರಣ ವೇದಿಕೆ ಕಾರ್ಕಳ, ಮಹೇಶ್ ಬೈಲೂರು, ದಿನೇಶ್ ಶೆಟ್ಟಿ ಹೆಬ್ರಿ, ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago