ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವ (ಅತ್ತೂರು ಜಾತ್ರೆ)ವು ಜ. 27ರಿಂದ 31ರ ವರೆಗೆ ಜರಗಲಿದೆ. ಜ. 20ರಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ ಎಂದು ಬಸಿಲಿಕಾದ ನಿರ್ದೇಶಕ ಫಾ| ಜಾರ್ಜ್ ಡಿ’ಸೋಜಾ ಅವರು ತಿಳಿಸಿದರು.
ವಾರ್ಷಿಕ ಮಹೋತ್ಸವದಲ್ಲಿ 35 ದಿವ್ಯ ಬಲಿಪೂಜೆಗಳು ಕೊಂಕಣಿಯಲ್ಲಿ,11 ಕನ್ನಡದಲ್ಲಿ ನಡೆಯಲಿವೆ. ಶಿವಮೊಗ್ಗ, ಬೆಳ್ತಂಗಡಿ, ಮೈಸೂರು, ಮಂಗಳೂರು ಹಾಗೂ ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಬಲಿಪೂಜೆ ನೆರವೇರಿಸಲಿದ್ದಾರೆ. ಜ. 28ರಂದು ಪೂರ್ವಾಹ್ನ10ಕ್ಕೆ ಅಸ್ವಸ್ಥರಿಗಾಗಿ ಪೂಜೆ ನಡೆಯಲಿದೆ.
ಮಹೋತ್ಸವಕ್ಕೆ ಸರ್ವರೀತಿಯ ಸಿದ್ಧತೆಗಳು ನಡೆಯುತ್ತಿವೆ. ಹಣ, ವಸ್ತುರೂಪದ ಹರಕೆ, ಮೋಂಬತ್ತಿ ಹರಕೆ ಸಲ್ಲಿಸಲು ಚರ್ಚ್ನ ಎಡಬದಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. 5 ಕಡೆಗಳಲ್ಲಿ ಕುಡಿಯುವ ನೀರು, 60 ಶೌಚಾಲಯ, ವಿವಿಧ ಭಾಗಗಳಿಂದ ಆಗಮಿಸುವವರಿಗೆ ಅಲ್ಲಲ್ಲಿ ಪಾರ್ಕಿಂಗ್, ಪಾಸ್ ಹೊಂದಿದವರಿಗೆ ಪರ್ಪಲೆಗುಡ್ಡೆಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಂಗಡಿ, ಸ್ಟಾಲ್ಗಳಲ್ಲಿ ದುಡಿಯುವ ಕಾರ್ಮಿಕರಿಗೆ ಶೌಚಾಲಯ, ಸ್ನಾನಗೃಹಗಳನ್ನು ನಿರ್ಮಿಸಲು ಸ್ಥಳೀಯ ಆಡಳಿತಕ್ಕೆ ತಿಳಿಸಲಾಗಿದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…