ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವ (ಅತ್ತೂರು ಜಾತ್ರೆ)ವು ಜ. 27ರಿಂದ 31ರ ವರೆಗೆ ಜರಗಲಿದೆ. ಜ. 20ರಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ ಎಂದು ಬಸಿಲಿಕಾದ ನಿರ್ದೇಶಕ ಫಾ| ಜಾರ್ಜ್ ಡಿ’ಸೋಜಾ ಅವರು ತಿಳಿಸಿದರು.
ವಾರ್ಷಿಕ ಮಹೋತ್ಸವದಲ್ಲಿ 35 ದಿವ್ಯ ಬಲಿಪೂಜೆಗಳು ಕೊಂಕಣಿಯಲ್ಲಿ,11 ಕನ್ನಡದಲ್ಲಿ ನಡೆಯಲಿವೆ. ಶಿವಮೊಗ್ಗ, ಬೆಳ್ತಂಗಡಿ, ಮೈಸೂರು, ಮಂಗಳೂರು ಹಾಗೂ ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಬಲಿಪೂಜೆ ನೆರವೇರಿಸಲಿದ್ದಾರೆ. ಜ. 28ರಂದು ಪೂರ್ವಾಹ್ನ10ಕ್ಕೆ ಅಸ್ವಸ್ಥರಿಗಾಗಿ ಪೂಜೆ ನಡೆಯಲಿದೆ.
ಮಹೋತ್ಸವಕ್ಕೆ ಸರ್ವರೀತಿಯ ಸಿದ್ಧತೆಗಳು ನಡೆಯುತ್ತಿವೆ. ಹಣ, ವಸ್ತುರೂಪದ ಹರಕೆ, ಮೋಂಬತ್ತಿ ಹರಕೆ ಸಲ್ಲಿಸಲು ಚರ್ಚ್ನ ಎಡಬದಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. 5 ಕಡೆಗಳಲ್ಲಿ ಕುಡಿಯುವ ನೀರು, 60 ಶೌಚಾಲಯ, ವಿವಿಧ ಭಾಗಗಳಿಂದ ಆಗಮಿಸುವವರಿಗೆ ಅಲ್ಲಲ್ಲಿ ಪಾರ್ಕಿಂಗ್, ಪಾಸ್ ಹೊಂದಿದವರಿಗೆ ಪರ್ಪಲೆಗುಡ್ಡೆಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಂಗಡಿ, ಸ್ಟಾಲ್ಗಳಲ್ಲಿ ದುಡಿಯುವ ಕಾರ್ಮಿಕರಿಗೆ ಶೌಚಾಲಯ, ಸ್ನಾನಗೃಹಗಳನ್ನು ನಿರ್ಮಿಸಲು ಸ್ಥಳೀಯ ಆಡಳಿತಕ್ಕೆ ತಿಳಿಸಲಾಗಿದೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…