ಕಾರ್ಕಳ : ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವಕ್ಕೂ ಈ ಬಾರಿ ಸುಪ್ರೀಂ ಕೋರ್ಟ್ ನಿಯಮದ ಬಿಸಿ ತಟ್ಟಿದೆ. ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಸದಂತೆ ಅತ್ತೂರು ಚರ್ಚ್ ಪಾಲನಾ ಸಮಿತಿಯವರಿಗೆ ಪೊಲೀಸರು ಸೂಚನೆ ನೀಡಿದ್ದಾರೆ.
ಹೀಗಾಗಿ ಬಹುವರ್ಷಗಳಿಂದ ಹಗಲಿರುಳು 5 ದಿನಗಳ ಕಾಲ ಅದ್ದೂರಿಯಾಗಿ ನಡೆಯುತ್ತಿದ್ದ ಸರ್ವಧರ್ಮೀಯರ ಪುಣ್ಯ ಕ್ಷೇತ್ರ ಅತ್ತೂರಿನ ಜಾತ್ರೆ ಸಡಗರಕ್ಕೂ ತಡೆಯಾಗಿದೆ. ಮುಖ್ಯವಾಗಿ ವ್ಯಾಪಾರ, ವ್ಯವಹಾರಕ್ಕೆ ತೊಡಕಾಗಿದೆ. ಈ ಬಾರಿ ಅತ್ತೂರು ಸುತ್ತಮುತ್ತ ಸುಮಾರು 400 ಸ್ಟಾಲ್ಗಳು ಬಾಡಿಗೆ ಆಧಾರ ಮೇಲೆ ತೆರೆದಿದೆ. ಅಮ್ಯೂಸ್ಮೆಂಟ್ ಸೇರಿದಂತೆ ಮನೋರಂಜನೆಗಾಗಿ ಒಂದಷ್ಟು ಕೇಂದ್ರಗಳಿವೆ. ರಾತ್ರಿ 10 ಗಂಟೆಯ ಬಳಿಕ ಪೊಲೀಸರು ಧ್ವನಿವರ್ಧಕಕ್ಕೆ ಬ್ರೇಕ್ ಹಾಕುವುದರಿಂದ ಸ್ಟಾಲ್ಗಳನ್ನು ಬಾಡಿಗೆಗೆ ಪಡೆದವರು ವ್ಯಾಪಾರ ಕುಂಠಿತದಿಂದಾಗಿ ಕಂಗಾಲಾಗಿದ್ದಾರೆ.
ಅತ್ತೂರು ಜಾತ್ರೆಯು ಜ. 26ರಂದು ಪ್ರಾರಂಭಗೊಂಡು ಜ. 30ರವರೆಗೆ ನಡೆಯಲಿದ್ದು, ಈ ಹಿಂದೆ ಮುಂಜಾನೆವರೆಗೂ ಅಂದರೆ ಜನ ವಿರಳವಾಗುವಲ್ಲಿ ತನಕ ಅಂಗಡಿ ಮುಂಗಟ್ಟುಗಳು ತೆರೆದಿರುತ್ತಿದ್ದವು.
ಮೆನ್ ಕಡಿತ
ಅತ್ತೂರಿನ ಬರುವ ಭಕ್ತರ ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಈ ಹಿಂದಿನ ಬಾರಿಯೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗುತ್ತಿತ್ತು. ಡಿವೈಎಸ್ಪಿ, ಸಿಪಿಐ, 8 ಪಿಎಸ್ಐ, 200 ಮಂದಿ ಸಿವಿಲ್ ಪೊಲೀಸ್, 100 ಡಿಎಆರ್ ತುಕಡಿ, 50 ಮಂದಿ ಗೃಹ ರಕ್ಷಕ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತಿತ್ತು. ಸುಮಾರು 64 ಕಡೆ ಸಿಸಿಟಿವಿ ಅಳವಡಿಸಲಾಗುತ್ತಿತ್ತು. ಆದರೆ ಈ ಬಾರಿ ಕೇವಲ 30 ಮಂದಿ ಪೊಲೀಸರು, 50 ಸೆಕ್ಯೂರಿಟಿ ಗಾರ್ಡ್ ಮತ್ತು 40 ಹೋಂ ಗಾರ್ಡ್ಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಅದು ಕೂಡ ಪಾವತಿ ಆಧಾರ ಮೇಲೆಯೇ ಎನ್ನುವುದು ವಿಶೇಷ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…