ಕಾರ್ಕಳ : ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವಕ್ಕೂ ಈ ಬಾರಿ ಸುಪ್ರೀಂ ಕೋರ್ಟ್ ನಿಯಮದ ಬಿಸಿ ತಟ್ಟಿದೆ. ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಸದಂತೆ ಅತ್ತೂರು ಚರ್ಚ್ ಪಾಲನಾ ಸಮಿತಿಯವರಿಗೆ ಪೊಲೀಸರು ಸೂಚನೆ ನೀಡಿದ್ದಾರೆ.
ಹೀಗಾಗಿ ಬಹುವರ್ಷಗಳಿಂದ ಹಗಲಿರುಳು 5 ದಿನಗಳ ಕಾಲ ಅದ್ದೂರಿಯಾಗಿ ನಡೆಯುತ್ತಿದ್ದ ಸರ್ವಧರ್ಮೀಯರ ಪುಣ್ಯ ಕ್ಷೇತ್ರ ಅತ್ತೂರಿನ ಜಾತ್ರೆ ಸಡಗರಕ್ಕೂ ತಡೆಯಾಗಿದೆ. ಮುಖ್ಯವಾಗಿ ವ್ಯಾಪಾರ, ವ್ಯವಹಾರಕ್ಕೆ ತೊಡಕಾಗಿದೆ. ಈ ಬಾರಿ ಅತ್ತೂರು ಸುತ್ತಮುತ್ತ ಸುಮಾರು 400 ಸ್ಟಾಲ್ಗಳು ಬಾಡಿಗೆ ಆಧಾರ ಮೇಲೆ ತೆರೆದಿದೆ. ಅಮ್ಯೂಸ್ಮೆಂಟ್ ಸೇರಿದಂತೆ ಮನೋರಂಜನೆಗಾಗಿ ಒಂದಷ್ಟು ಕೇಂದ್ರಗಳಿವೆ. ರಾತ್ರಿ 10 ಗಂಟೆಯ ಬಳಿಕ ಪೊಲೀಸರು ಧ್ವನಿವರ್ಧಕಕ್ಕೆ ಬ್ರೇಕ್ ಹಾಕುವುದರಿಂದ ಸ್ಟಾಲ್ಗಳನ್ನು ಬಾಡಿಗೆಗೆ ಪಡೆದವರು ವ್ಯಾಪಾರ ಕುಂಠಿತದಿಂದಾಗಿ ಕಂಗಾಲಾಗಿದ್ದಾರೆ.
ಅತ್ತೂರು ಜಾತ್ರೆಯು ಜ. 26ರಂದು ಪ್ರಾರಂಭಗೊಂಡು ಜ. 30ರವರೆಗೆ ನಡೆಯಲಿದ್ದು, ಈ ಹಿಂದೆ ಮುಂಜಾನೆವರೆಗೂ ಅಂದರೆ ಜನ ವಿರಳವಾಗುವಲ್ಲಿ ತನಕ ಅಂಗಡಿ ಮುಂಗಟ್ಟುಗಳು ತೆರೆದಿರುತ್ತಿದ್ದವು.
ಮೆನ್ ಕಡಿತ
ಅತ್ತೂರಿನ ಬರುವ ಭಕ್ತರ ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಈ ಹಿಂದಿನ ಬಾರಿಯೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗುತ್ತಿತ್ತು. ಡಿವೈಎಸ್ಪಿ, ಸಿಪಿಐ, 8 ಪಿಎಸ್ಐ, 200 ಮಂದಿ ಸಿವಿಲ್ ಪೊಲೀಸ್, 100 ಡಿಎಆರ್ ತುಕಡಿ, 50 ಮಂದಿ ಗೃಹ ರಕ್ಷಕ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತಿತ್ತು. ಸುಮಾರು 64 ಕಡೆ ಸಿಸಿಟಿವಿ ಅಳವಡಿಸಲಾಗುತ್ತಿತ್ತು. ಆದರೆ ಈ ಬಾರಿ ಕೇವಲ 30 ಮಂದಿ ಪೊಲೀಸರು, 50 ಸೆಕ್ಯೂರಿಟಿ ಗಾರ್ಡ್ ಮತ್ತು 40 ಹೋಂ ಗಾರ್ಡ್ಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಅದು ಕೂಡ ಪಾವತಿ ಆಧಾರ ಮೇಲೆಯೇ ಎನ್ನುವುದು ವಿಶೇಷ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…