ಕಾರ್ಕಳ: ಸರ್ವಧರ್ಮ ಸಮನ್ವಯ ಕೇಂದ್ರ ಅತ್ತೂರಿನ ವಾರ್ಷಿಕ ಮಹೋತ್ಸವ ಜ. 30ರಂದು ಸಂಪನ್ನಗೊಂಡಿತು. ಜ. 26ರಿಂದ ಪ್ರಾರಂಭಗೊಂಡು 5 ದಿನಗಳ ಕಾಲ ಸಾಂತ್ ಮಾರಿ ಹಬ್ಬ ವಿಜೃಂಭಣೆಯಿಂದ ನಡೆದಿದ್ದು, ಈ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ಕೃತಾರ್ಥರಾದರು.
ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ಪೀಟರ್ ಪಾವ್ ಸಲ್ಡಾನ್ಹಾ ಅವರು ಮಾರ್ಗದರ್ಶಿ ಮಾತೆಯ ಸಂಭ್ರಮದ ಪೂಜೆ ನೆರವೇರಿಸುವುದರೊಂದಿಗೆ ಐದು ದಿನಗಳ ಮಹೋತ್ಸವಕ್ಕೆ ತೆರೆ ಬಿದ್ದಿತು.
ಅಂತಿಮ ದಿನದಂದು ಪುಣ್ಯಕ್ಷೇತ್ರದಲ್ಲಿ ಹತ್ತು ಬಲಿಪೂಜೆಗಳು ನೆರವೇರಿದವು. ಮಹೋತ್ಸವದ ಅಂತಿಮ ಬಲಿಪೂಜೆಯು ರಾತ್ರಿ 9.30 ಗಂಟೆಗೆ ನೆರವೇರಿತು. ಧರ್ಮಗುರುಗಳು ಭಕ್ತಾದಿಗಳಿಗೆ ಪಾಪ ನಿವೇದನೆಯ ಸಂಸ್ಕಾರವನ್ನು ನೀಡಿ, ಆಶೀರ್ವದಿಸಿದರು. ಸೇವಾದರ್ಶಿಗಳು ಅಸ್ವಸ್ಥರ ಶಿರದ ಮೇಲೆ ಹಸ್ತಗಳನ್ನಿಟ್ಟು ಪ್ರಾರ್ಥಿಸುತ್ತಿರುವುದು ಕಂಡುಬಂತು.
ಅಂತಿಮ ದಿನದಂದು ಮಂಗಳೂರಿನ ಧರ್ಮಾಧ್ಯಕ್ಷರ ಹಬ್ಬದ ಬಲಿಪೂಜೆಯ ಹೊರತಾಗಿ, ಬ್ರಹ್ಮಾವರದ ವಂ| ವಿಕ್ಟರ್ ಫೆರ್ನಾಂಡಿಸ್, ಮಂಗಳೂರು ರೊಸಾರಿಯೊ ಚರ್ಚಿನ ವಂ| ಜೆ.ಬಿ. ಕ್ರಾಸ್ತಾ, ವಂ| ವಾಲ್ಟರ್ ಡಿಮೆಲ್ಲೊ, ವಂ| ಮ್ಯಾಕ್ಷಿಮ್ ನೊರೊನ್ಹಾ, ಉಡುಪಿ ಧರ್ಮಪ್ರಾಂತದ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ವಂ| ವಿನ್ಸೆಂಟ್ ಕ್ರಾಸ್ತ ಹಾಗೂ ಉಜ್ವಾಡ್ ಕೊಂಕಣಿ ಪತ್ರಿಕೆಯ ಸಂಪಾದಕ ವಂ| ರೊಯ್ಸನ್ ಫೆರ್ನಾಂಡಿಸ್ ಕೊಂಕಣಿ ಭಾಷೆಯಲ್ಲಿ ಬಲಿಪೂಜೆ ನೆರವೇರಿಸಿದರು. ಚಿಕ್ಕಮಗಳೂರಿನ ವಂ| ಫ್ರೆಡರಿಕ್ ಪಾಯ್ಸ, ಬಸರೀಕಟ್ಟೆಯ ವಂ| ವಿನ್ಸೆಂಟ್ ಡಿಸೋಜಾ ಹಾಗೂ ಸಾಗರದ ವಂ| ಎಫ್ರೆಮ್ ಡಯಾಸ್ ಕನ್ನಡ ಬಲಿಪೂಜೆಗಳನ್ನು ನೆರವೇರಿಸಿ ಭಕ್ತಾದಿಗಳಿಗಾಗಿ ಪ್ರಾರ್ಥಿಸಿದರು.
ಅತ್ತೂರು ಬಳಿಯ ಪರಿಸರ ಸ್ವತ್ಛಗೊಳಿಸುವ ನಿಟ್ಟೆ ನಿಟ್ಟೆ ಗ್ರಾಮ ಪಂಚಾಯತ್ ವಿಶೇಷ ಮುತುವರ್ಜಿ ವಹಿಸಿತ್ತು. ಸುಮಾರು 25 ಮಂದಿ 5 ದಿನಗಳ ಕಾಲ ಸ್ವತ್ಛತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ 2 ಗಂಟೆಯ ಅನಂತರ ಚರ್ಚ್ ವಠಾರದಲ್ಲಿ ಜನ ವಿರಳವಾಗುವುದರಿಂದ 2 ಗಂಟೆಯಿಂದ ಬೆಳಗ್ಗೆ 7 ಗಂಟೆವರೆಗೆ ಸ್ವತ್ಛತಾ ಸಿಬಂದಿ ಕಾರ್ಯನಿರ್ವಹಿಸುತಿದ್ದರು.
ಈ ಬಾರಿ ಅಮ್ಯೂಸ್ಮೆಂಟ್ ಪಾರ್ಕ್ ಎಲ್ಲರ ಗಮನ ಸೆಳೆಯುತ್ತಿತ್ತು. ಮಕ್ಕಳ ಅಚ್ಚುಮೆಚ್ಚಿನ ಡ್ರಾಗನ್ ಬೋಟ್, ವಾಟರ್ ಬೋಟ್, ಏರ್ ಮಿಕ್ಕಿ ಮೌಸ್ ಅಲ್ಲಿತ್ತು. ಬೃಹದಾಕಾರದ ಜಾಯಿಂಟ್ ವ್ಹೀಲ್ ಆಕರ್ಷಣೀಯವಾಗಿತ್ತು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…