ಕಾರ್ಕಳ : ಅನಾರೋಗ್ಯದಿಂದ ಮನನೊಂದು ಕಾರ್ಕಳದ ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನ ಕೊಠಡಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾರ್ಕಳದ ನಿಟ್ಟೆ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕುಂದಾಪುರದ ಕರಾವಳಿ ಶೀರೂರು ನಿವಾಸಿ ಸೀಮಾ ಆತ್ಮಹತ್ಯೆ ಮಾಡಿಕೊಂಡವರು. ವಿದ್ಯಾಭ್ಯಾಸದ ಸಲುವಾಗಿ ನಿಟ್ಟೆ ಕಾಲೇಜಿನ ಹಾಸ್ಟೆಲ್ ನಲ್ಲಿ ವಾಸಮಾಡಿಕೊಂಡಿದ್ದ ಸೀಮಾ ಅವರು ನರ ಹಾಗೂ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದರು.
ಈ ಬಗ್ಗೆ ಹಲವಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಗುಣಮುಖವಾಗದೇ ಇದ್ದೂದರಿಂದ ಮನನೊಂದು 4-5 ತಿಂಗಳ ಹಿಂದೆ ನಿದ್ರೆ ಮಾತ್ರೆ ಹಾಗೂ ಆರೋಗ್ಯದ ಸಮಸ್ಯೆಯ ಬಗ್ಗೆ ಇದ್ದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅದೇ ಕಾರಣದಿಂದ ಮನನೊಂದು ಫೆ.2 ರಂದು ಮಧ್ಯಾಹ್ನದಿಂದ ಸಂಜೆಯ ನಡುವಿನ ಅವಧಿಯಲ್ಲಿ ಹಾಸ್ಟೆಲ್ ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮೃತರ ತಾಯಿ ಶೀಲಾವತಿ ಶೆಡ್ಡಿ ಅವರು ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…