ಕಾರ್ಕಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರು ತಮ್ಮ ಅನಾರೋಗ್ಯದ ಕಾರಣಕ್ಕೆ ಗ್ಯಾರಂಟಿ ಯೋಜನೆಯಾದ ಗೃಹ ಲಕ್ಷ್ಮೀ ಹಣ ಬಿಡುಗಡೆ ವಿಳಂಬ ಹೇಳಿಕೆ ಸಮಂಜಸವಲ್ಲ. ಆರೋಗ್ಯ ಸರಿಯಿಲ್ಲದಿದ್ದರೆ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು, ಸಹಾಯಕರು ಇದ್ದಾರೆ. ಗೃಹ ಲಕ್ಷ್ಮೀ ಯೋಜನೆಗೆ ಹಣ ತಮ್ಮ ಖಾಸಗಿ ಖಾತೆಯಿಂದಲ್ಲ. ಜನರ ತೆರಿಗೆಯ ಹಣ, ಸರಕಾರದ ಖಜಾನೆಯಿಂದ ನೀಡುವುದು ಎಂದು ಕಾರ್ಕಳ ಮಹಿಳಾ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.
ಅನಾರೋಗ್ಯದ ಕುಂಟು ನೆಪವೊಡ್ಡಿ ಸರಕಾರದ ಹುಳುಕನ್ನು ಮುಚ್ಚಿ ಹಾಕುವ ಪ್ರಯತ್ನ ಇದಾಗಿದೆ. ಉಪ ಚುನಾವಣೆ ಸಂದರ್ಭಗಳಲ್ಲಿ ತರಾತುರಿಯಲ್ಲಿ ಹಣ ಹಾಕುವ ವ್ಯವಸ್ಥೆ ಇರುವಾಗ ಬಾಕಿ ಸಮಯದಲ್ಲಿ ತಡವೇಕೆ ? ಮಾನ್ಯ ಸಚಿವರ ಆರೋಗ್ಯ ಶೀಘ್ರ ಗುಣಮುಖವಾಗಲಿ ಎಂಬ ಆಶಯ ನಮ್ಮದು. ಹಾಗಂತ ಚುನಾವಣೆ ಸಂದರ್ಭದಲ್ಲಿ ನೀಡಿದ ವಚನಕ್ಕೆ ಬದ್ಧರಾಗಿ ಸಮಯಕ್ಕೆ ಸರಿಯಾಗಿ ರಾಜ್ಯದ ಬಡ ಮಹಿಳೆಯರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವಿನಯ ಡಿ. ಬಂಗೇರ ಆಗ್ರಹಿಸಿದ್ದಾರೆ.
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…